Advertisement

ಒಳ್ಳೆ ಸೇಬು ಇರುವಾಗ ಕೊಳೆತ ಮಾವಿನ ಹಣ್ಣು ಯಾರಿಗ್ರಿ ಬೇಕು : ಕಾಂಗ್ರೆಸ್ ಗೆ ಈಶ್ವರಪ್ಪ ಟಾಂಗ್

12:35 PM Jan 26, 2022 | Team Udayavani |

ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷ ಕೊಳೆತು ನಾರುತ್ತಿದೆ, ಆ ಪಕ್ಷಕ್ಕೆ ಯಾರಾದರೂ ಸೇರುತ್ತಾರೆಯೇ.. ಹೀಗೆಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

Advertisement

ಬಿಜೆಪಿ ಪಕ್ಷದ ಕೆಲವು ಶಾಸಕರು ಹಾಗೂ ಸಂಸದರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ ಅವರ ಮಾತಿಗೆ ಪ್ರತಿಕ್ರೀಯೆ ನೀಡಿದ ಈಶ್ವರಪ್ಪ ಕಾಂಗ್ರೆಸ್ ಕೊಳೆತು ಹೋಗಿರುವ ಮಾವಿನ ಹಣ್ಣು ಹಾಗೆಯೆ ಬಿಜೆಪಿ ಮೋದಿಯಂತಹ ವ್ಯಕ್ತಿಯ ಒಳ್ಳೆ ಸೇಬು ಹಣ್ಣು .. ಒಳ್ಳೆಯ ಸೇಬು ಹಣ್ಣು ಇರುವಾಗ ಕೊಳೆತ ಮಾವಿನ ಹಣ್ಣು ಯಾರಿಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಡಿಮ್ಯಾಂಡ್ ಕ್ರಿಯೇಟ್ ಮಾಡೋದಕ್ಕೆ ಸಿದ್ದರಾಮಯ್ಯ, ಡಿಕೆಶಿ ಸೇರಿ ಈ ಆಟ ಆಡುತ್ತಿದ್ದಾರೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು, ಸರ್ಕಾರ ಕಳೆದುಕೊಂಡರು, ಈಗಲೂ ಮಾನ ಮರ್ಯಾದೆ ಇಲ್ಲದ ಹಾಗೆ ಈ ರೀತಿ ಮಾತನಾಡುತ್ತಿದ್ದಾರೆ.

ನರೇಂದ್ರ ಮೋದಿಯಂಥ ನಾಯಕ ಕಾಂಗ್ರೆಸ್ ನಲ್ಲಿ, ಜೆಡಿಎಸ್ ನಲ್ಲಿ ಸಿಕ್ತಾರಾ? ನಮ್ಮತ್ರ ಬೈಸಿಕೊಳ್ಳೋಕೆ ಈ ರೀತಿ ಮಾತುಗಳನ್ನು ಆಡುತ್ತಿದ್ದಾರೆ. ನಾನು ಬದುಕಿದ್ದೇನೆ, ಜೀವಂತವಿದ್ದೀನಿ ಅಂತಹ ತೋರಿಸಿಕೊಳ್ಳೋಕೆ ಸಿದ್ದರಾಮಯ್ಯ ಈ ರೀತಿ ಮಾತಾಡ್ತಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ : ದೆಹಲಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

Advertisement

ಕಾಂಗ್ರೆಸ್ ಸಂಪರ್ಕದಲ್ಲಿ ಎಷ್ಟು ಜನ ಇದ್ದಾರೆ ಅನ್ನೋದನ್ನ ಹೇಳಲ್ಲ, ಹೆಸರನ್ನು ಹೇಳಲ್ಲ ಇಟ್ಕೋ ನಿನ್ನ ಹತ್ರನೇ, ನಮಗೇನಂತೆ ಎಂದು ಏಕವಚನದಲ್ಲೇ ವಾಗ್ದಾಳಿ ಮಾಡಿದ ಈಶ್ವರಪ್ಪ ಒಬ್ಬ ಬಿಜೆಪಿ ಸಿಂಹದಮರಿ ಎಂಎಲ್ಎನ ಕಾಂಗ್ರೆಸ್ಗೆ ಬರ್ತಾರೆ ಅಂತಾ ಹೆಸರು ಹೇಳಲಿ ಎಂದು ಕಾಂಗ್ರೆಸ್ ಗೆ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಪಕ್ಷವನ್ನು ಸಾಯಿಸುತ್ತಾರೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್ ಮಹಾಪುರುಷರೆಲ್ಲಾ ಹೋಗಿದ್ದಾರೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸ್ವಾರ್ಥಿಗಳು ಇವರ ಸ್ವಾರ್ಥಕ್ಕೆ ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ, ಪಾದಯಾತ್ರೆ ಮಾಡುತ್ತಾರೆ. ಇವತ್ತು ನೀನು ವಿರೋಧ ಪಕ್ಷದ ನಾಯಕ ಅಲ್ಲವೆಂದು ಸಿದ್ದರಾಮಯ್ಯಗೆ ಹೇಳಿದ್ರೆ ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ಖಂಡಿತವಾಗಿಯೂ ಇರಲ್ಲ ಜೆಡಿಎಸ್ ನಲ್ಲಿ ಅವಕಾಶ ಸಿಕ್ಕಿಲ್ಲವೆಂದು ಪಕ್ಷ ಬಿಟ್ಟರು, ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತೆ ಅಂತಾ ಕಾಂಗ್ರೆಸ್ ಗೆ ಬಂದ್ರು ಅಂದಿನಿಂದಲೂ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅಲಂಕರಿಸುತ್ತಾ ಬಂದಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ನಲ್ಲಿ ಬೇರೆ ಯಾರು ನಾಯಕರು ಇಲ್ವಾ.? ಎಂದು ಪ್ರಶ್ನೆ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next