Advertisement

ಸುಳ್ಳು ಕೇಸ್; ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

06:31 PM Aug 19, 2017 | Sharanya Alva |

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಎಸಿಬಿ ಅಧಿಕಾರಿಗಳನ್ನು ಬಳಸಿಕೊಂಡು ಸುಳ್ಳು ಕೇಸ್ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಭಾನುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಾಯಕ, ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.

Advertisement

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರ ಮೇಲೆ ಸುಳ್ಳು ಕೇಸ್ ದಾಖಲಿಸಲಾಗಿದೆ. ಎಸಿಬಿ ಅಧಿಕಾರಿಗಳಿಗೆ ಪ್ರಮೋಷನ್ ಆಮಿಷವೊಡ್ಡಿ ಬಿಎಸ್ ವೈ ವಿರುದ್ಧ ಕೇಸ್ ಹಾಕಲಾಗಿದೆ ಎಂದು ದೂರಿದರು.

ಬಿಎಸ್ ವೈ ವಿರುದ್ಧ ಸುಳ್ಳು ಹೇಳಲು ಇಬ್ಬರು ಎಸಿಬಿ ಅಧಿಕಾರಿಗಳು ಒತ್ತಡ ಹೇರಿರುವುದಾಗಿ ಬಸವರಾಜೇಂದ್ರ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next