Advertisement

ಕನ್ಹಯ್ಯ ಲಾಲ್ ಹತ್ಯೆ : ಇದು ಹಿಂದು ಸಮುದಾಯಕ್ಕೆ ಆದ ಅಪಮಾನ : ಈಶ್ವರಪ್ಪ ಆಕ್ರೋಶದ ನುಡಿ

05:14 PM Jun 29, 2022 | Team Udayavani |

ಶಿವಮೊಗ್ಗ : ದೇಶದ್ರೋಹಿಗಳು ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಅವರ ಹತ್ಯೆ ಹತ್ಯೆ ನಿಜಕ್ಕೂ ಖಂಡನೀಯ ಇದು ಹಿಂದು ಸಮುದಾಯಕ್ಕೆ ಆದಂತಹ ಅಪಮಾನ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಿಡಿಕಾರಿದ್ದಾರೆ.

Advertisement

ಶಿವಮೊಗ್ಗದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು ರಾಜಸ್ಥಾನದಲ್ಲಿ ಕನ್ನಯ್ಯ ಅವರ ಕಗ್ಗೊಲೆ ಕೇವಲ ಒಂದು ಪ್ರದೇಶಕ್ಕೆ ಸೀಮಿತವಾಗಿರದೆ. ಇಡೀ ಹಿಂದು ಸಮಾಜಕ್ಕೆ ಇದು ಸವಾಲಾಗಿದೆ. ನಮ್ಮ ಶ್ರದ್ಧಾಕೇಂದ್ರಗಳು ನೂರಾರು ವರ್ಷದಿಂದ ಅಪವಿತ್ರಗೊಂಡಿವೆ. ಅಯೋಧ್ಯೆಯಲ್ಲಿದ್ದ ರಾಮಮಂದಿರ ಧ್ವಂಸ ಮಾಡಿ ಬಾಬರಿ ಮಸೀದಿ ಕಟ್ಟಿದ್ದರು. ಇದು ಗೊತ್ತಿದ್ದರೂ ಕೂಡ ಅಪಮಾನವನ್ನು ನೂರಾರು ವರ್ಷ ಸಹಿಸಿಕೊಂಡು ಬಂದಿದ್ದೆವು. ಇಂದಿಗೂ ಕಾಶಿಯಲ್ಲಿ ವಿಶ್ವನಾಥನ ಲಿಂಗ ನೀರಿನಲ್ಲಿತ್ತು. ಆ ನೀರಿನಲ್ಲಿ‌ ಮುಸಲ್ಮಾನರು ಕಾಲು ತೊಳೆದುಕೊಂಡು ಹೋಗಿ ನಮಾಜು ಮಾಡುತ್ತಿದ್ದರು. ಮಥುರಾದಲ್ಲಿ ಶ್ರೀಕೃಷ್ಣನ ಜನ್ಮ ಸ್ಥಳದ ದೇವಾಲಯ ಧ್ವಂಸ ಮಾಡಿ ಮಸೀದಿ ಕಟ್ಟಿದ್ದಾರೆ. ಈ ಮೂರು ದೇವಸ್ಥಾನಗಳನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಕೊತ್ತೂರು ಮಂಜುನಾಥ್,ಡಾ.ಎಂ.ಸಿ. ಸುಧಾಕರ್ ಕಾಂಗ್ರೆಸ್ ಸೇರ್ಪಡೆ

ಹಿಂದು ಸಮಾಜ ಅಪಮಾನ ಸಹಿಸಿಕೊಂಡು ಶಾಂತಿಯಿಂದ ಇರುವಾಗ ನೂಪುರ್ ಶರ್ಮಾ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಮುಸ್ಲಿಂ ದೇಶಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಯಿತು.. ಆದರೆ ಇದೀಗ ರಾಜಸ್ಥಾನದಲ್ಲಿ ಬಡ ಟೈಲರ್ ಕೊಲೆ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ‌ಮೋದಿಯನ್ನು ಕೊಲೆ ಮಾಡುವುದಾಗಿ ಹೇಳಿದ್ದಾರೆ‌ ಇದು ಹಿಂದು ಸಮುದಾಯಕ್ಕೆ ಆದ ಅಪಮಾನ ಹಾಗೂ ಸವಾಲು. ಇಷ್ಟೆಲ್ಲಾ ಆದರೂ ಕಾಂಗ್ರೆಸ್ ನಾಯಕರು ಆಗಿದ್ದು ಆಯಿತು ಎನ್ನುತ್ತಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ, ಸೋನಿಯಾಗಾಂಧಿ, ಸಿದ್ದರಾಮಯ್ಯ , ಡಿ.ಕೆ.ಶಿವಕುಮಾರ್ ಬಾಯಿ ಬಿಟ್ಟಿಲ್ಲ.

ಸ್ವತಃ ರಾಷ್ಟ್ರದ್ರೋಹಿ ಕೊಲೆಗಟುಕರು ನಾವೇ ಕೊಂದಿದ್ದೇವೆ ಎಂದಿದ್ದಾರೆ. ಆದರೆ ಈಗಿನ ಕಾನೂನಿನಲ್ಲಿ ಅವರ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳಲು ಅವಕಾಶವಿಲ್ಲ. ಈಗಿನ ಕಾನೂನಿನಲ್ಲಿ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಕೂಡಾ ಇದೆ, ಕೂಡಲೇ ಪ್ರಧಾನಮಂತ್ರಿಗಳು ಕಾನೂನನ್ನು ಬದಲಾವಣೆ ಮಾಡಬೇಕು. ಕೊಲೆಗಡುಕರು ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡ ಮೇಲೆ ವಿಚಾರಣೆಯ ಅಗತ್ಯವಿಲ್ಲ. ಕೊಲೆಗಡುಕ ಎಂದು ತೀರ್ಮಾನವಾದ ಕೂಡಲೆ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಅಥವಾ ಗಲ್ಲಿಗೇರಿಸಬೇಕು ಎಂದರು.

Advertisement

ನೂಪುರ್ ಅವರ ಹೇಳಿಕೆಯಿಂದ ಇಷ್ಟು ಪ್ರತಿಭಟನೆ ಮಾಡುತ್ತಾರೆ ಎಂದರೆ ಕನ್ನಯ್ಯ ರೀತಿಯಲ್ಲೇ ಮೋದಿಯನ್ನು ಕೊಲೆ ಮಾಡುತ್ತೇವೆ ಎಂದವರನ್ನು ನಾವು ಸುಮ್ಮನೆ ಬಿಡಬೇಕಾ. ಅಲ್ಲದೆ ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ.
ಮದರಸಾಗಳನ್ನು ಬ್ಯಾನ್ ಮಾಡಬೇಕು‌. ಇಲ್ಲವೇ ಅಲ್ಲಿ ದೇಶಭಕ್ತಿ ಮೂಡಿಸುವ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು ಎಂದರು.

ಪ್ರಧಾನಿಯನ್ನ ಕೊಲ್ಲುತ್ತೇವೆ ಎಂದು ಹೇಳಿರುವ ಹೇಳಿಕೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಚರ್ಚೆಯಾಗಬೇಕು‌. ಜೊತೆಗೆ ಉಗ್ರರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಬೇಕು.

ಮುಂದೆ ಹಿಂದುಗಳ ಆಕ್ರೋಶದಿಂದ ದೇಶದಲ್ಲಿ ಏನುಬೇಕಾದರೂ ಆಗಬಹುದು ಪ್ರದಾನಿ ಮೋದಿ ಅವರು ತುರ್ತು ಅಧಿವೇಶನ ಕರೆದು ಈ ರೀತಿಯ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮದ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು,

ಕನ್ನಯ್ಯ ಕೊಲೆ ಪ್ರಕರಣ ಎನ್ ಐಎಗೆ ವಹಿಸುವುದಾಗಿ ಸರಕಾರ ಹೇಳಿದೆ, ದೇಶದ್ರೋಹಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕೆಂದು ಈಶ್ವರಪ್ಪ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next