Advertisement

ಸಾರಿಗೆ ನೌಕರರ ಮುಷ್ಕರ: ಇಂದು ವಿಧಾನಸೌಧ ಚಲೋ, ಬಸ್‌ ಸೇವೆ ವ್ಯತ್ಯಯ ಸಾಧ್ಯತೆ

08:53 AM Dec 10, 2020 | keerthan |

ಬೆಂಗಳೂರು: “ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ’ ಎಂಬ ಘೋಷಣೆಯಡಿ ಸಾರಿಗೆ ಸಂಸ್ಥೆಯ ನೌಕರರು ಗುರುವಾರ (ಡಿ.10) ನಗರದಲ್ಲಿ ವಿಧಾನ ಸೌಧ ಚಲೋ ನಡೆಸಲಿದ್ದು, ರಾಜ್ಯದಲ್ಲಿ ಬಸ್‌ ಸೇವೆ ವ್ಯತ್ಯಯವಾಗುವ ಸಾಧ್ಯತೆಯಿದೆ.

Advertisement

ಬೆಳಗ್ಗೆ 10 ಗಂಟೆಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಜಾಥಾ ಹೊರಡಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಹಲವು ನೌಕರರ ಸಂಘಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅಧಿಕಾರಿಗಳು, ಸಾರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ಮತ್ತಿತರರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದು ಸಾರಿಗೆ ನೌಕರರ ಮುಖಂಡ ಆನಂದ್‌ ತಿಳಿಸಿದ್ದಾರೆ.

ಈ ಮಧ್ಯೆ, ಸದನದಲ್ಲಿ ಮಾತನಾಡಿದ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next