Advertisement

ದೇವರಕೊಲ್ಲಿ: ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಸರಕಾರಿ ಬಸ್ಸು ಪಲ್ಟಿ

10:20 PM Aug 17, 2020 | Hari Prasad |

ಸುಳ್ಯ: ಮಡಿಕೇರಿಯ ದೇವರಕೊಲ್ಲಿ ಸಮೀಪ ಸರಕಾರಿ ಬಸ್ಸೊಂದು ರಸ್ತೆ ಬದಿಗೆ ಉರುಳಿಬಿದ್ದಿರುವ ದುರ್ಘಟನೆ ವರದಿಯಾಗಿದೆ.

Advertisement

ಪುತ್ತೂರು ಡಿಪೋಗೆ ಸೇರಿದ್ದ ಈ ಸರಕಾರಿ ಬಸ್ಸು ಮಡಿಕೇರಿಯಿಂದ ಪುತ್ತೂರಿಗೆ ಮರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬಸ್ಸಿನಲ್ಲಿ ಎಷ್ಟು ಪ್ರಯಾಣಿಕರಿದ್ದರು ಮತ್ತು ಘಟನೆಯಲ್ಲಿ ಎಷ್ಟು ಜನರಿಗೆ ಗಾಯಗಳಾಗಿವೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ರಸ್ತೆ ಜಾರುತ್ತಿದ್ದುದೇ ಈ ಅಪಘಾತಕ್ಕೆ ಕಾರಣವಾಗಿರಬಹುದೆಂದು ಇದೀಗ ಶಂಕಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next