Advertisement

ಉಪ್ಪಿನಂಗಡಿ : KSRTC ಬಸ್ಸಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು

10:06 AM Mar 09, 2020 | sudhir |

ಉಪ್ಪಿನಂಗಡಿ: ಕಾರೊಂದು ಕೆಎಸ್ಆರ್ ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.

Advertisement

ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡರ ಪುತ್ರ ದಯೇಶ್ (26) ಮೃತ ವ್ಯಕ್ತಿ.

ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಇವರು ಚಲಾಯಿಸಿಕೊಂಡು ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಇಲ್ಲಿನ ಸಿಟಿ ಲ್ಯಾಂಡ್ ಎದುರುಗಡೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಕಡಬಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದ್ದು , ಗಂಭೀರ ಗಾಯಗೊಂಡ ಕಾರು ಚಾಲಕ ದಯೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ದಯೇಶ್ ಪುತ್ತೂರಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಉತ್ತಮ ಕೆಲಸಗಾರ ಎನ್ನಲಾಗುತ್ತಿದೆ.

ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next