Advertisement

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

12:54 PM May 14, 2024 | Team Udayavani |

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಸ್ಲೀಪರ್ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

Advertisement

ಬೆಂಕಿಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 40ಜನ‌ ಪ್ರಯಾಣಿಸುತ್ತಿದ್ದರು.‌ ತರೀಕೆರೆ ತಾಲೂಕು‌ ಅಜ್ಜಂಪುರ ಕ್ರಾಸ್ ಬಳಿ ಮಧ್ಯರಾತ್ರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿ ದ್ದಂತೆ ಚಾಲಕ‌ ಬಸ್ ನಿಲ್ಲಿಸಿ ದ್ದಾನೆ.

ತಕ್ಷಣ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಹಕ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ‌ ದಳದ ಸಿಬ್ಬಂದಿ ಗಳು ಬೆಂಕಿ ನಂದಿಸಿದ್ದಾರೆ.

ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದೆ. ಬೆಂಕಿ ಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ.

ಇದನ್ನೂ ಓದಿ: ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Advertisement
Advertisement

Udayavani is now on Telegram. Click here to join our channel and stay updated with the latest news.

Next