Advertisement

ಸಾಗರ: ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಕೆಎಸ್ಆರ್ ಟಿಸಿ ಬಸ್!

11:18 AM Jul 30, 2021 | keerthan |

ಶಿವಮೊಗ್ಗ: ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ಸೊಂದು ಕೆರೆಗೆ ಉರುಳಿದ ಘಟನೆ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಈ ಘಟನೆ ನಡೆದಿದೆ. ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ಕೆರೆಗೆ ಉರುಳಿದೆ.

ಇದನ್ನೂ ಓದಿ:ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!

ಈ ಕೆಎಸ್ಆರ್ ಟಿಸಿ ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು. ಕಾಸ್ಪಾಡಿ ಕ್ರಾಸ್ ಬಳಿ ಬರುವಾಗ ಈ ಘಟನೆ ನಡೆದಿದೆ.

Advertisement

ಘಟನೆಯಲ್ಲಿ ಬೈಕ್ ಸವಾರರಾದ ದೀಪಕ್ ಹಾಗೂ ಪ್ರಜ್ವಲ್ ಗೆ ಗಂಭೀರ ಗಾಯವಾಗಿದೆ. ಅವರಿಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್ಆರ್ ಟಿಸಿ ಬಸ್ ನಲ್ಲಿದ್ದ ಸುಮಾರು 20 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next