Advertisement

ಕೆಎಸ್ಆರ್‌ಟಿಸಿ ಬಸ್ ಪಲ್ಟಿ: 15 ಜನರಿಗೆ ಗಾಯ

11:10 AM Oct 12, 2019 | keerthan |

ಗದಗ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಬದಿಗೆ ಉರುಳಿದ ಘಟನೆ ಸಂಕನೂರು ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.

Advertisement

ಘಟನೆಯಲ್ಲಿ ಸುಮಾರು 15 ಜನರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ.

ಕೆಎಸ್ ಆರ್ ಟಿಸಿ ಬಸ್ ಯಾದಗಿರಿಯಿಂದ ಧಾರವಾಡ ಕಡೆಗೆ ಹೊರಟಿತ್ತು. ಈ ವೇಳೆ ಗಜೇಂದ್ರಗಡ – ನರೇಗಲ್ ಮಾರ್ಗದಲ್ಲಿ ಬರುವ ಸಂಕನೂರ ಕ್ರಾಸ್ ಬಳಿ ರಸ್ತೆ ಬದಿಗೆ ಉರುಳಿದೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next