Advertisement

ಹಿರಿಯೂರು ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ: ಬಾಲಕಿ ಸೇರಿ ಇಬ್ಬರ ದುರ್ಮರಣ

07:50 AM Dec 06, 2020 | keerthan |

ಚಿತ್ರದುರ್ಗ: ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐದು ಜನ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ.

Advertisement

ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದೆ. ಮೃತರನ್ನು ಯಾದಗಿರಿ ಮೂಲದ ಬಸವರಾಜ್ (32), ಐಶ್ವರ್ಯ ‌(12) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸುತ್ತಲೇ ಕೆಎಸ್ಆರ್ ಟಿಸಿ ಬಸ್ ನ ಚಾಲಕ ನಿರ್ವಾಹಕರು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:ಮುಖ್ಯ ರಸ್ತೆಯಲ್ಲೇ ಅಪಾಯಕಾರಿ ರೀತಿ ಬಸ್ಸುಗಳ ನಿಲುಗಡೆ

ಬಸ್ಸಿನಲ್ಲಿ ಮಕ್ಕಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ದೂರು ‌ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next