Advertisement

KSRTC ಹೊಸ ವರ್ಷದಿಂದ ಅಪಘಾತ ಪರಿಹಾರ 3 ಲಕ್ಷದಿಂದ 10 ಲಕ್ಷಕ್ಕೆ ಏರಿಕೆ

07:35 PM Dec 27, 2023 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು 2024 ಜನವರಿ 1 ರಿಂದ ಜಾರಿಗೆ ಬರುವಂತೆ 3 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಬುಧವಾರ ತಿಳಿಸಿದೆ.

Advertisement

ಅಪಘಾತಕ್ಕೀಡಾದವರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ನೀಡಲು, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 50 ರಿಂದ 99 ರೂಪಾಯಿಗಳ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ. ಸಂಗ್ರಹಿಸಲಾಗುತ್ತದೆ.100 ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದ ಪ್ರಯಾಣಿಕರಿಂದ 2 ರೂ.ಗಳನ್ನು ಸಂಗ್ರಹಿಸಲಾಗುವುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ, 100 ರೂ ಮತ್ತು ಅದಕ್ಕಿಂತ ಹೆಚ್ಚಿನ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ 1 ರೂ ಮೊತ್ತವನ್ನು ಪರಿಹಾರ ನಿಧಿಗೆ ಸಂಗ್ರಹಿಸಲಾಗುತ್ತಿತ್ತು .ರೂ 1 ರಿಂದ ರೂ 49 ರ ಟಿಕೆಟ್ ಮೌಲ್ಯದೊಂದಿಗೆ ಪ್ರಯಾಣಿಸುವ ಪ್ರಯಾಣಿಕರಿಂದ ಯಾವುದೇ ಅಪಘಾತ ಪರಿಹಾರ ನಿಧಿಯ ಕೊಡುಗೆಯನ್ನು ಸಂಗ್ರಹಿಸಲಾಗುವುದಿಲ್ಲ ಎಂದು ಹೇಳಿಕೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next