Advertisement

ಆಟೋಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ: ನಾಲ್ವರ ದುರ್ಮರಣ

10:01 AM Jul 05, 2019 | Vishnu Das |

ತುಮಕೂರು: ತಾಲೂಕಿನ ಮಲ್ಲಸಂದ್ರ ಬಳಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ.

Advertisement

ಆಟೋ ಚಾಲಕ ಹರೀಶ್ (37), ಪ್ರಯಾಣಿಕರಾದ ವೃದ್ಧ ದಂಪತಿ ಬಸವರಾಜು(67), ಗಂಗಾಂಬಿಕಾ (61) ಮತ್ತು ಇನ್ನೋರ್ವ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಗಳು ತುಮಕೂರಿಗೆ ಖಾಸಗಿ ಆಸ್ಪತ್ರೆ ಗೆ ಚಿಕಿತ್ಸೆಗೆಂದು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ಗುಬ್ಬಿ ತಾಲೂಕಿನ ಮತ್ತಿಗಟ್ಟ ನಿವಾಸಿಗಳು ಎಂದು ತಿಳಿದು ಬಂದಿದೆ.

Advertisement

ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ.

ಇಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಮಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next