Advertisement

KSRTC: ಬೇಡಿಕೆ ಮೇರೆಗೆ ಹೊಸ ರೂಟ್‌: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

12:50 AM Jul 20, 2024 | Team Udayavani |

ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದ ಮಾರ್ಗಗಳ ಪೈಕಿ 9 ಮಾರ್ಗಗಳು ಪುನರಾರಂಭಕ್ಕೆ ಬಾಕಿ ಇದ್ದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ 10 ಸಂಚಾರ ಹೊಸದಾಗಿ ಆರಂಭಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

Advertisement

ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಕೋವಿಡ್‌ ಹಿನ್ನೆಲೆಯಲ್ಲಿ 43 ರೂಟ್‌ಗಳ ಪೈಕಿ 34 ರೂಟ್‌ಗಳನ್ನು ಆರಂಭಿಸಲಾಗಿದೆ. 9 ರೂಟ್‌ಗಳು ಬಾಕಿಯಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಬೇಡಿಕೆ ನೀಡಿದ ಹಿನ್ನೆಲೆಯಲ್ಲಿ ಕುಂದಾಪುರ ಬಡಾಕೆರೆ ಮಾರ್ಗದಲ್ಲಿ ಹೊಸದಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದರಲ್ಲದೇ ಶಕ್ತಿ ಯೋಜನೆ ಬಳಿಕ ವಿವಿಧ ಮಾರ್ಗಗಳಲ್ಲಿ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಬೇಡಿಕೆ ಬಂದಿದ್ದು ರೂಟ್‌ಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next