Advertisement

KSRTC: ನಿವೃತ್ತ ನೌಕರರ ಹೆಚ್ಚುವರಿ ಪಿಂಚಣಿ ಸಮಸ್ಯೆ ಪರಿಹರಿಸಲು ಮನವಿ

10:53 PM Sep 27, 2024 | Team Udayavani |

ಮಂಗಳೂರು: ಕೆಎಸ್‌ಆರ್‌ಟಿಸಿಯ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದನ್ನು ಆದ್ಯ ತೆಯ ನೆಲೆಯಲ್ಲಿ ಬಗೆಹರಿಸು ವಂತೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದಾರೆ.

Advertisement

ದಿಲ್ಲಿಯಲ್ಲಿ ಮಂಗಳವಾರ ಸಚಿವೆಗೆ ಮನವಿ ಸಲ್ಲಿಸಿದ ಸಂಸದರು, ಪಿಂಚಣಿ ಅನುಷ್ಠಾನ ವಿಳಂಬದಿಂದ ಫಲಾನುಭವಿಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ವಿವರಿಸಿದ್ದಾರೆ.

2014ರ ಸೆ.1ರ ಬಳಿಕ 58 ವರ್ಷ ಪೂರ್ಣಗೊಳಿಸಿ ನಿವೃತ್ತರಾದ ವಿನಾಯಿತಿ ಇರುವ ಮತ್ತು ಇಲ್ಲದ ಸಂಸ್ಥೆಗಳ ನೌಕರರು ಕೂಡ ಇತರ ನೌಕರರಂತೆ ಹೆಚ್ಚುವರಿ ಪಿಂಚಣಿ ಪಡೆಯುವುದಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್‌ ಈ ಹಿಂದೆಯೇ ತೀರ್ಪು ನೀಡಿದೆ. ಆದರೆ ಈ ಸಂಬಂಧ ಅರ್ಜಿ ಸಲ್ಲಿಸಿರುವ ನಿವೃತ್ತ ಕೆಎಸ್‌ಆರ್‌ಟಿಸಿ ಉದ್ಯೋಗಿಗಳಿಗೆ ಹೆಚ್ಚುವರಿ ಪಿಂಚಣಿ ನೀಡುವ ಅನುಷ್ಠಾನ ಪ್ರಕ್ರಿಯೆ ವಿಳಂಬವಾಗುತ್ತಿದೆ. ದಕ್ಷಿಣ ಕನ್ನಡ ಕ್ಷೇತ್ರವೊಂದರಲ್ಲೇ ಸುಮಾರು 600ಕ್ಕೂ ಹೆಚ್ಚು ಮಂದಿ ಈ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕ್ಯಾ| ಬ್ರಿಜೇಶ್‌ ಚೌಟ ಅವರು ಸಚಿವರ ಗಮನಕ್ಕೆ ತಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next