Advertisement

ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆ

12:17 PM Apr 19, 2022 | Team Udayavani |

ವಿಟ್ಲ:  ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್‌ಆರ್‌ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ  ಮೃತಪಟ್ಟ ಘಟನೆ   ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ.

Advertisement

ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ ವ್ಯಕ್ತಿ.

ಮಂಗಳೂರು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಟಿಸಿಯಾಗಿ ಕೆಲಸ ಮಾಡಿಕೊಂಡಿರುವ ಜನಾರ್ದನ ಅವರು ಎ.17 ರಂದು ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಿದ್ದರು. ಎ.18ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇದ್ದರು. ಮಧ್ಯಾಹ್ನದ ವೇಳೆ ಯಾವುದೋ ವಿಷ ಪದಾರ್ಥ ಸೇವಿಸಿ ಮನೆ ಹತ್ತಿರದ ಬಾವಿಗೆ ಹಾರಿದ್ದರು. ಇದನ್ನು ಕಂಡ ಅವರ ಪತ್ನಿ ರೇಣುಕಾ ಹಾಗೂ ಅವರ ಪುತ್ರ ಪ್ರಜ್ವಲ್ ಅವರು ಹಗ್ಗದ ಸಹಾಯದಿಂದ ಅವರನ್ನು ಮೇಲಕ್ಕೆತ್ತಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ನಾನೇ ಕಾಂಗ್ರೆಸ್ ಅಭ್ಯರ್ಥಿ ನನ್ನ ವಿರುದ್ಧ ಷಡ್ಯಂತ್ರ ನಡೆಯೋಲ್ಲ: ಆಡಿಯೋ ವೈರಲ್

ಈ ಬಗ್ಗೆ ಮೃತರ ಪುತ್ರ ಪ್ರಜ್ವಲ್ ದೂರು ನೀಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next