Advertisement

KSRTC ಕೆಟ್ಟು ನಿಂತು ಪರದಾಡಿದ ಪ್ರಯಾಣಿಕರು: ನೆರವಿಗೆ ಬಂದ ಶಾಸಕಿ ನಯನಾ ಮೋಟಮ್ಮ

07:22 PM Sep 20, 2023 | Team Udayavani |

ಕೊಟ್ಟಿಗೆಹಾರ: ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತುಂಬಿದ ಪ್ರಯಾಣಿಕರ ಘನ ಭಾರದಿಂದ ಬಸ್ ನ ಪರ್ಚ್ ಕಟ್ ಆಗಿ ಜಾವಳಿ ಕೆಳಗೂರು ಮಾರ್ಗ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದರು.

Advertisement

ಶಕ್ತಿ ಯೋಜನೆಯ ಹಿನ್ನಲೆಯಲ್ಲಿ ಬಸ್ ನಲ್ಲಿ ಗಂಡಸರು, ಮಹಿಳೆಯರು, ಶಾಲಾ ಮಕ್ಕಳು ಸೇರಿದಂತೆ 90 ಕ್ಕೂ ಅಧಿಕ ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.

ನೆರವಿಗೆ ಬಂದ ಶಾಸಕಿ
ಈ ಮಾರ್ಗ ಮಧ್ಯೆ ಸುಂಕಸಾಲೆಯಲ್ಲಿ ಕಾರ್ಯಕ್ರಮ ಮುಗಿಸಿ ಬರುವಾಗ ಬಸ್ ಕೆಟ್ಟು ನಿಂತು ನೋಡಿ ಕಾರು ನಿಲ್ಲಿಸಿ ಪ್ರಯಾಣಿಕರ ಯೋಗ ಕ್ಷೇಮ ವಿಚಾರಿಸಿದರು.ಬಳಿಕ ಬಸ್ ಬಗ್ಗೆ ಚಾಲಕರಲ್ಲಿ ವಿಚಾರಿಸಿದಾಗ ಕೆಟ್ಟು ನಿಂತಿರುವುದು ಗಮನಕ್ಕೆ ಬಂದು ಕೂಡಲೇ ಶಾಸಕಿ ನಯನಾ ಮೋಟಮ್ಮ ಕೆಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಪೋನ್ ಮಾಡಿ ಬೇರೆ ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರಿಗೆ ನೆರವಾದರು.

Advertisement

Udayavani is now on Telegram. Click here to join our channel and stay updated with the latest news.

Next