Advertisement

ಕೆಎಸ್‌ಆರ್‌ಟಿಸಿ: ಪರೀಕ್ಷೆಗೆ ಹಾಜರಾಗಲು ಅಂತಿಮ ಅವಕಾಶ

07:15 AM Apr 17, 2018 | Team Udayavani |

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಮಂಗಳೂರು, ಚಾಮರಾಜನಗರ ಮತ್ತು ಪುತ್ತೂರು ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಪರೀಕ್ಷೆಗೆ ಹಾಜರಾಗಲು ಅಂತಿಮ ಅವಕಾಶ ನೀಡಲಾಗಿದೆ.

Advertisement

ಅಭ್ಯರ್ಥಿಗಳು ಸ್ವಯಂ ವೇಳಾಪಟ್ಟಿ ಅನುಸಾರ ಮತ್ತೂಮ್ಮೆ ಪ್ರವೇಶ ಪತ್ರಗಳನ್ನು ಏ.23ರ ಒಳಗೆ ಡೌನ್‌ಲೋಡ್‌ ಮಾಡಿಕೊಂಡು, ಪ್ರವೇಶಪತ್ರದಲ್ಲಿ ನಮೂದಿಸಲಾದ ದಿನಾಂಕದಂದು ತಪ್ಪದೆ ವೃತ್ತಿ ಪರೀಕ್ಷೆಗೆ ಹಾಜರಾಗಬೇಕು. ಈ ಹಿಂದೆ ಅಭ್ಯರ್ಥಿಗಳ ಸ್ವಯಂ ವೇಳಾಪಟ್ಟಿ ಅನುಸಾರ ವೃತ್ತಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು. ಆದರೆ, ಅದರಲ್ಲಿ ಕೆಲವರು ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಂಡು, ಪರೀಕ್ಷೆಗೆ ಹಾಜರಾಗಿಲ್ಲ. ಇನ್ನೂ ಹಲವರು ಇದುವರೆಗೆ ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಂಡಿಲ್ಲ. ಆದ್ದರಿಂದ ಈಗ ಮತ್ತೂಮ್ಮೆ ಅವಕಾಶ ನೀಡಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next