Advertisement

ಕೆಎಸ್‌ಆರ್‌ಟಿಸಿ: 1,013 ನೌಕರರ ವರ್ಗಾವಣೆ

11:15 PM Nov 30, 2022 | Team Udayavani |

ಬೆಂಗಳೂರು: ಅಂತರ್‌ ನಿಗಮ ವರ್ಗಾವಣೆಗೆ ಕೋರಿ ಅರ್ಜಿ ಸಲ್ಲಿಸಿದ್ದ 4,665 ಸಾರಿಗೆ ನಿಗಮಗಳ ನೌಕರರ ಪೈಕಿ 1,013 ನೌಕರರನ್ನು ವರ್ಗಾವಣೆ ಮಾಡಿ ಬುಧವಾರ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.

Advertisement

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4ರ ನೌಕರರ ಅಂತರ ನಿಗಮ ವರ್ಗಾವಣೆ ಮಾಡಲಾಗಿದ್ದು, ಆದೇಶ ಪತ್ರಗಳನ್ನು ನಿಗಮದ ವೆಬ್‌ಸೈಟ್‌ //ksrtc.karnataka.gov.in ನಲ್ಲಿ ಪ್ರಕಟಿಸಲಾಗಿದೆ. ಸೇವಾ ಜ್ಯೇಷ್ಠತೆ ಮತ್ತು ಹಾಲಿ ಹು¨ªೆಗಳಿಗೆ ಅನುಗುಣವಾಗಿ ಕೌನ್ಸೆಲಿಂಗ್‌ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು.

ಈ ಸಂಬಂಧದ ಕೌನ್ಸೆಲಿಂಗ್‌ ಡಿ. 5ರಿಂದ 15ರ ತನಕ ವೆಬ್‌ಸೈಟ್‌ನಲ್ಲಿ (ksrtc.org/counseling)ನಡೆಸಲಾಗುವುದು. ಈ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ನಲ್ಲಿ ನಡೆಯುವುದರಿಂದ ಲಿಖಿತ ಅರ್ಜಿಗಗಳ ಆಧಾರದ ಮೇಲೆ ಯಾವುದೇ ಕ್ರಮ ವಹಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿರ್ದೇಶಕರು (ಸಿಬಂದಿ ಮತ್ತು ಜಾಗೃತ) ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next