Advertisement

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಬಂಧನ

11:59 PM Dec 24, 2022 | Team Udayavani |

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸಹಿತ ನಾಲ್ವರನ್ನು ಬೆಂಗಳೂರಿನ ವೈಯಲಿ ಕಾವಲ್‌ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೃಷ್ಣಾ ರೆಡ್ಡಿ, ನಟರಾಜ್‌, ಗುರುಸಿದ್ದಪ್ಪ ಬಂಧಿತ ಇತರರು.

Advertisement

ರಾಜ್ಯ ಸರಕಾರದ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ವನ್ನು ಕೆಂಪಣ್ಣ ಮಾಡಿದ್ದರು. ಜತೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧವೂ ಈ ನಾಲ್ವರು ಶೇ.40 ಕಮಿಷನ್‌ ಆರೋಪ ಮಾಡಿದ್ದರು. ಈ ಸಂಬಂಧ ಸಚಿವರು ಕೋರ್ಟ್‌ನಲ್ಲಿ ಕ್ರಿಮಿನಲ್‌ ಮತ್ತು 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next