Advertisement

Karnataka Election ದ.ಕ.: 12 ಅಭ್ಯರ್ಥಿಗಳಿಂದ ನಾಮಪತ್ರ ಹಿಂತೆಗೆತ

06:48 PM Apr 24, 2023 | Team Udayavani |

ಮಂಗಳೂರು: ದ.ಕ. ಜಿಲ್ಲೆಯ ೮ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 12 ಮಂದಿ ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದಾರೆ.

Advertisement

ಮಂಗಳೂರು ನಗರ ಉತ್ತರ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಕಾಟಿಪಳ್ಳ ಮುಹಮ್ಮದ್ ನವಾಝ್, ಸುಪ್ರೀತ್ ಕುಮಾರ್ ಪೂಜಾರಿ, ಬಂಟ್ವಾಳ ಕ್ಷೇತ್ರದಿಂದ ಅಬ್ದುಲ್ ಮಜೀದ್ ಖಾನ್, ಬೆಳ್ತಂಗಡಿಯಿಂದ ಕೆ. ಸುಬ್ರಹ್ಮಣ್ಯ ಭಟ್, ನವಾಝ್ ಶರೀಫ್ , ಮೂಡುಬಿದಿರೆಯಿಂದ ಮ್ಯಾಕ್ಸಿಂ ಪಿಂಟೋ, ಪುತ್ತೂರಿನಿಂದ ಪಿ. ಇಬ್ರಾಹಿಂ, ಮುಹಮ್ಮದ್ ಅಶ್ರಫ್ ಕಲ್ಲೇಗ, ಮಂಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ , ಪಕ್ಷೇತರಾಗಿ ಮುಹಮ್ಮದ್ ಅತಾವುಲ್ಲಾ, ಜನಹಿತ ಪಕ್ಷದಿಂದ ಬಾಲಕೃಷ್ಣ ಪೂಜಾರಿ ಬೋಳಿಯಾರು ಹಾಗೂ ಸುಳ್ಯ ಕ್ಷೇತ್ರದಿಂದ ಪಕ್ಷೇತರಾಗಿ ಸತೀಶ್ ಬೂಡುಮಕ್ಕಿ ನಾಮಪತ್ರ ಹಿಂಪಡೆದಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಮಂಗಳೂರು ದಕ್ಷಿಣ ಮತ್ತು ಬಂಟ್ವಾಳ ಕ್ಷೇತ್ರದ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಹಿಂಪಡೆದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next