Advertisement

Kuap: ಪಾಂಗಾಳ ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ಪತ್ತೆ

12:22 AM Oct 22, 2024 | Team Udayavani |

ಕಾಪು: ಪಾಂಗಾಳ ಮಟ್ಟು ಪಾಪನಾಶಿನಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಪ್ರದೇಶಕ್ಕೆ ಅ.20ರಂದು ದಾಳಿ ನಡೆಸಿದ ಪೊಲೀಸರು, ನಾಲ್ಕು ಯುನಿಟ್‌ ಮರಳು ಸಹಿತ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಕಾಪು ಎಸ್‌ಐ ಅಬ್ದುಲ್‌ ಖಾದರ್‌ ಅವರಿಗೆ ದೊರಕಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ವೇಳೆ ಮರಳುಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ರಾಜೇಶ್‌, ಸತೀಶ್‌, ಅರವಿಂದ ಅವರು ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ದೋಣಿ ಮೂಲಕ ನದಿಯಿಂದ ಮರಳನ್ನು ಸಂಗ್ರಹಿಸುತ್ತಿರುವುದಾಗಿ ತಿಳಿದು ಬಂದಿದ್ದು ಅದನ್ನು ಬೆಳಗಿನ ಜಾವದ ಸಮಯದಲ್ಲಿ ಟೆಂಪೋ ಮುಖಾಂತರ ಮರಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದರು. ಮರಳು ತೆಗೆಯಲು ಬಳಸಿದ್ದ ದೋಣಿ, ಹಾರೆಗಳನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next