Advertisement

BJPಗೆ ಶಾಕ್! “ಕೈ” ಪಾಳಯ ಸೇರಲು ಕೂಡ್ಲಿಗಿ ಶಾಸಕ ನಾಗೇಂದ್ರ ಸಿದ್ಧತೆ?

03:30 PM Jan 01, 2018 | Sharanya Alva |

ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಳಗದಿಂದ ಸಾಕಷ್ಟು ಅಂತರ ಕಾಯ್ದುಕೊಳ್ಳುತ್ತಿದ್ದ ಕೂಡ್ಲಿಗಿ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಕಾಂಗ್ರೆಸ್ ಪಾಳಯಕ್ಕೆ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದಾರೆ ಎಂದು ಖಾಸಗಿ ವಾಹಿನಿಯೊಂದರ ವರದಿ ತಿಳಿಸಿದೆ.

Advertisement

ಜನವರಿ 29ರಂದು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಎಸ್ ಟಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬರಲು ಒಪ್ಪಿದ್ದು, ಈ ಸಂದರ್ಭದಲ್ಲಿಯೇ ಬಿ. ನಾಗೇಂದ್ರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದೆ.

ಈಗಾಗಲೇ ದೆಹಲಿ ಹಾಗೂ ಕೆಪಿಸಿಸಿ ನಾಯಕರ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ನಾಗೇಂದ್ರ ಸೇರ್ಪಡೆಗೆ ರಾಹುಲ್ ಗಾಂಧಿಯೂ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ.  ಜನವರಿ 4ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ನಾಗೇಂದ್ರ ಗೈರು ಹಾಜರಾಗಲಿದ್ದಾರೆ ಎಂದು ವರದಿ ವಿವರಿಸಿದೆ.

2008ರಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಿ.ನಾಗೇಂದ್ರ, 2013ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹ ಹಬ್ಬಿತ್ತು.

Advertisement

Udayavani is now on Telegram. Click here to join our channel and stay updated with the latest news.

Next