Advertisement

ಕುಜುಂಬಾರು: ಮತ ಚಲಾಯಿಸದೇ ಆಕ್ರೋಶ; ಶ್ರಮಸೇವೆಯಲ್ಲಿ ಮತದಾರರು

12:40 AM May 11, 2023 | Team Udayavani |

ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್‌ನಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಇದ್ದರೂ ಬೇಡಿಕೆ ಈಡೇರಿಸದ ಹಿನೆಲೆಯಲ್ಲಿ ಆ ಭಾಗದ ಜನರು ಮತದಾನದಲ್ಲಿ ಭಾಗವಹಿಸದೇ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ.

Advertisement

ಕಡಬ ತಾಲೂಕಿನ ಕುಜುಂಬಾರಿಲ್ಲಿ ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ, ಮನವಿ ಸಲ್ಲಿಸಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪಿಸ ಲಾಗಿದೆ. ಇತ್ತೀಚೆಗೆ ಇಲ್ಲಿನ ಜನ ಮತದಾನ ಬಹಿಷ್ಕರಿಸುವ ಬ್ಯಾನರ್‌ ಅಳವಡಿಸಿದ್ದರು. ಆಗ ಸ್ಥಳೀಯ ಅಧಿಕಾರಿಗಳು ಆಗಮಿಸಿ ಜನರ ಮನವೊಲಿಸಿದ್ದರು. ಸೇತುವೆ ನಿರ್ಮಿಸ ದಿದ್ದಲ್ಲಿ ಮತದಾನ ಬಹಿಷ್ಕಾರ ಎಂಬ ನಿರ್ಧಾರಕ್ಕೂ ಅಂದೇ ಬಂದಿದ್ದರು.

ಆದರೂ ಸೇತುವೆ ನಿರ್ಮಿಸುವ ಬಗ್ಗೆ ಯಾವುದೇ ಭರವಸೆ ನೀಡದ ಹಿನ್ನೆಲೆಯಲ್ಲಿ ಸುಮಾರು 30 ಮನೆಗಳ 80ಕ್ಕೂ ಅಧಿಕ ಜನರು ಮತ ಚಲಾಯಿಸಿಲ್ಲ. ಬದಲಿಗೆ ಹೊಳೆಗೆ ಸಂಪರ್ಕ ಕಲ್ಪಿಸುವ ಪಾಲ ನಿರ್ಮಾಣದಲ್ಲಿ ಶ್ರಮಸೇವೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next