Advertisement

ಇಂದಿನಿಂದ ಚಂಪಾಷಷ್ಠಿ ಮಹೋತ್ಸವ

01:32 AM Dec 01, 2021 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಮಂಗಳವಾರ ಕ್ಷೇತ್ರದ ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.

Advertisement

ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯ ಅವರು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಮೂಲ ಪ್ರಸಾದ ತೆಗೆದರು. ಆ ಬಳಿಕ ಪುರೋಹಿತರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು,ಅಧಿಕಾರಿಗಳು, ಸಿಬಂದಿಗೆ ನೀಡಲಾಯಿತು. ಭಕ್ತರು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಅಪರಾಹ್ನ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್‌ಎನ್‌ ಪ್ರಸಾದ್‌, ಲೋಕೇಶ್‌ ಬಾಳುಗೋಡು, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ಇಒ ಡಾ| ನಿಂಗಯ್ಯ, ಎಇಒ ಪುಷ್ಪಲತಾ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಇಂದು ಕೊಪ್ಪರಿಗೆ ಏರುವುದು
ಕ್ಷೇತ್ರದಲ್ಲಿ ಡಿ.1ರಿಂದ 15ರ ವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರಾ ಮಹೋ ತ್ಸವ ಆರಂಭವಾಗಲಿದೆ. ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನೆರವೇರಲಿದೆ.

Advertisement

ಸರ್ಪ ಸಂಸ್ಕಾರ ಇಲ್ಲ
ಚಂಪಾಷಷ್ಠಿ ಪ್ರಯುಕ್ತ ಡಿ.1ರಿಂದ ಡಿ. 15ರಂದು ಕೊಪ್ಪರಿಗೆ ಇಳಿಯುವ ತನಕ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.16ರಿಂದ ಸರ್ಪ ಸಂಸ್ಕಾರ ಸೇವೆ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next