Advertisement

ಮಹಾಶಿವರಾತ್ರಿ ಹಿನ್ನೆಲೆ: ಕುಕ್ಕೆಯಲ್ಲಿ ಭಕ್ತ ಸಂದಣಿ

11:50 PM Feb 19, 2023 | Team Udayavani |

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಾಗೂ ವಾರಾಂತ್ಯ ರಜೆಯ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಅಪಾರ ಸಂಖ್ಯೆಯ ಭಕ್ತರ ಆಗಮನವಾಗಿದೆ.

Advertisement

ಮಹಾ ಶಿವರಾತ್ರಿ ಅಂಗವಾಗಿ ಹೊರ ಜಿಲ್ಲೆ, ರಾಜ್ಯಗಳಿಂದ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುತ್ತಾರೆ. ಮರುದಿನ ನೇರವಾಗಿ ಕುಕ್ಕೆಗೆ ಆಗಮಿಸುವುದು ವಾಡಿಕೆ. ಭಕ್ತರು ಕುಮಾರಧಾರಾ ನದಿಯಲ್ಲಿ ಮಿಂದು ಕಾಲ್ನಡಿಗೆಯಲ್ಲಿ ದೇವಸ್ಥಾನಕ್ಕೆ ಬಂದು ಶ್ರೀ ದೇವರ ದರುಶನ ಪಡೆದು, ಅನ್ನಪ್ರಸಾದ ಸ್ವೀಕರಿಸಿದರು.

ಕುಮಾರಧಾರಾ ಸ್ನಾನಘಟ್ಟ ಮತ್ತು ದೇವಸ್ಥಾನದ ಪರಿಸರ ರವಿವಾರ ಮುಂಜಾನೆಯಿಂದಲೇ ಭಕ್ತರಿಂದ ತುಂಬಿತ್ತು. ಪೇಟೆಯಲ್ಲಿ ವಾಹನಗಳು ಹಾಗೂ ಜನರ ಓಡಾಟವೂ ಅಧಿಕ ವಿತ್ತು. ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬಂದಿ ವಾಹನಗಳ ನಿಲುಗಡೆಗೆ ಮತ್ತು ಭಕ್ತರಿಗೆ ಪೂರಕ ವ್ಯವಸ್ಥೆ ಕಲ್ಪಿಸಲು ಸಹಕರಿಸಿದರು.

ಬಸ್‌ಗಾಗಿ ಪರದಾಟ
ಧರ್ಮಸ್ಥಳ – ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಕೆಎಸ್ಸಾರ್ಟಿಸಿ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಿತ್ತು. ಎಲ್ಲ ಬಸ್‌ಗಳಲ್ಲೂ ಪ್ರಯಾಣಿಕರು ತುಂಬಿದ್ದರು. ಆದರೆ ಸುಬ್ರಹ್ಮಣ್ಯದಿಂದ ಸಕಲೇಶಪುರ, ಹಾಸನ ಸೇರಿದಂತೆ ಇತರೆಡೆಗೆ ಬಸ್‌ಗಳ ಸಂಖ್ಯೆ ಕಡಿಮೆ ಇದ್ದ ಪರಿಣಾಮ ಯಾತ್ರಿಕರಿಗೆ ತೊಂದರೆಯಾಗಿದ್ದು, ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ಅಸಮಾಧಾನ ವ್ಯಕ್ತ ಪಡಿಸಿದರು. ಪೊಲೀಸರು ಆಗಮಿಸಿ ಪ್ರಯಾಣಿಕರನ್ನು ಸಮಾಧಾನಿಸಿದರು. ಬಳಿಕ ಕೆಎಸ್ಸಾರ್ಟಿಸಿ ಅಧಿಕಾರಿಗಳು ಬೇಡಿಕೆಯ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಿತು.

Advertisement

Udayavani is now on Telegram. Click here to join our channel and stay updated with the latest news.

Next