Advertisement

Kukke Subrahmanya : ಹೃದಯಾಘಾತದಿಂದ ವ್ಯಕ್ತಿ ಸಾವು

12:33 AM Nov 09, 2023 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.

Advertisement

ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.

ತತ್‌ಕ್ಷಣ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿದ್ದಾರೆಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next