Advertisement

Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ

09:29 PM Sep 23, 2024 | Team Udayavani |

ಸುಬ್ರಹ್ಮಣ್ಯ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಸರಕಾರ ಆಡಳಿತದಲ್ಲಿ ಸಂಪೂರ್ಣ ವೈಫ‌ಲ್ಯ ಕಂಡಿದೆ. ರಾಜ್ಯಾದ್ಯಂತ ಪ್ರವಾಸ ನಡೆಸಿ ರಾಜ್ಯ ಸರಕಾರದ ವೈಫಲ್ಯ, ಭ್ರಷ್ಟಾಚಾರ, ಹಗರಣಗಳನ್ನು ಜನರ ಮುಂದಿರಿಸಿ ಜಾಗೃತಿ ನಡೆಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ ಎಂದು ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜತೆ ಮಾತನಾಡಿದರು. ಅವರು ಪತ್ನಿ, ಮಗುವಿನೊಂದಿಗೆ ದೇವರ ದರ್ಶನ ಪಡೆದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್‌ ಉಪಾಧ್ಯಕ್ಷ ಜಾಕೆ ಮಾಧವ ಗೌಡ, ಕಡಬ ತಾಲೂಕು ಜೆಡಿಎಸ್‌ ಅಧ್ಯಕ್ಷ ಸಯ್ಯದ್‌ ಮೀರಾ ಸಾಹೇಬ್‌, ಪ್ರಮುಖರಾದ ಸಂತೋಷ್‌ ಜಾಕೆ, ಗೋಪಾಲ ಎಣ್ಣೆಮಜಲ್‌, ಶಿವರಾಮ ಯೇನೆಕಲ್‌, ಡಾ| ಎ.ಎ.ತಿಲಕ್‌, ವಿಶ್ವನಾಥ ನಡುತೋಟ, ನಾರಾಯಣ ಅಗ್ರಹಾರ, ಲೊಕೇಶ ಬಿ.ಎನ್‌., ಜಯರಾಮ ಕಟ್ಟೆಮನೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next