Advertisement

Kukke Subrahmanya Temple: ಕುಕ್ಕೆಗೆ ಇಸ್ರೋ ಡೈರೆಕ್ಟರ್‌ ಸಂಧ್ಯಾ ಶರ್ಮ ಭೇಟಿ

01:10 PM Sep 02, 2023 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಇಸ್ರೋದ ಅಡಿಷನಲ್‌ ಸೆಕ್ರೇಟರಿ (ಡೈರೆಕ್ಟರ್‌) ಸಂಧ್ಯಾ ವೇಣುಗೋಪಾಲ್‌ ಶರ್ಮ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.

Advertisement

ಗುರುವಾರ ರಾತ್ರಿ ಕ್ಷೇತ್ರಕ್ಕೆ ಆಗಮಿಸಿದ ಅವರು ಶುಕ್ರವಾರ ಶ್ರೀ ದೇಗುಲಕ್ಕೆ ಭೇಟಿ ನೀಡಿ ಮದ್ಯಾಹ್ನದ ಮಹಾಪೂಜೆ ವೀಕ್ಷಿಸಿದರು. ಬಳಿಕ ಇಸ್ರೋದಿಂದ ಸೂರ್ಯ ಗ್ರಹದ ಅಧ್ಯಯನಕ್ಕಾಗಿ ಉಡಾವಣೆಗೊಳ್ಳಲಿರುವ ಆದಿತ್ಯ ಎಲ್‌ 1 ಉಪಗ್ರಹವು ಯಾವುದೇ ತೊಂದರೆಗಳಿಲ್ಲದೆ ಉಡಾವಣೆಯಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಅರ್ಚಕ ವೆ| ಮೂ| ಸತ್ಯನಾರಾಯಣ ನೂರಿತ್ತಾಯರು ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ದೇಗುಲದ ಆಡಳಿತ ಕಚೇರಿಗೆ ಭೇಟಿ ನೀಡಿದ ಸಂಧ್ಯಾ ವಿ. ಶರ್ಮ ಅವರನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಸಮ್ಮಾನಿಸಿದರು. ಅಲ್ಲದೆ ಚಂದ್ರಯಾನ 3ರ ಯಶಸ್ಸಿಗಾಗಿ ಅಭಿನಂದನ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ವನಜಾ. ವಿ. ಭಟ್‌, ಶೋಭಾ ಗಿರಿಧರ್‌, ಶಿಷ್ಠಾಚಾರ ಅಧಿಕಾರಿ ಜಯರಾಂ ರಾವ್‌, ಮನೋಜ್‌ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ದೇಗುಲದ ಆಡಳಿತ ಕಚೇರಿಗೆ ಭೇಟಿ ನೀಡಿದ ಸಂಧ್ಯಾ ವಿ. ಶರ್ಮ ಅವರನ್ನು ಸಮ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next