Advertisement

Kukke Subrahmanya Temple: ಅನ್ನದಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ ನಟ ಯಶ್‌

12:37 AM Aug 07, 2024 | Team Udayavani |

ಸುಬ್ರಹ್ಮಣ್ಯ: ನಟ ಯಶ್‌ ಅವರು ಪತ್ನಿ ರಾಧಿಕಾ ಪಂಡಿತ್‌ ಹಾಗೂ ಮಕ್ಕಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವರ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಅರ್ಚಕರು ಪ್ರಸಾದ ನೀಡಿದರು.

Advertisement

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ನಟ ಯಶ್‌ ಅವರನ್ನು ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ದೇಗುಲದ ವತಿಯಿಂದ ನಡೆಯುತ್ತಿರುವ ಅನ್ನದಾನಕ್ಕೆ ಯಶ್‌ ಅವರು ಒಂದು ಲಕ್ಷ ರೂ. ದೇಣಿಗೆ ನೀಡಿದರು.

ನಟ ಯಶ್‌ ಅವರ ಮುಂದಿನ ಚಿತ್ರದ ಶೂಟಿಂಗ್‌ ಮುಂದಿನ ದಿನಗಳಲ್ಲಿ ಆರಂಭವಾಗಲಿದ್ದು, ಅದಕ್ಕೂ ಮೊದಲು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆಯಲು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಸುಬ್ರಹ್ಮಣ್ಯ ಎಸ್‌ಐ ಕಾರ್ತಿಕ್‌ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next