Advertisement

ಕುಕ್ಕೆ: ಭಾರೀ ಮಳೆಗೆ ಉಕ್ಕಿಹರಿದ ದರ್ಪಣತೀರ್ಥ

08:32 AM Sep 24, 2019 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ದಿಢೀರನೆ ಭಾರೀ ಮಳೆ ಸುರಿದಿದೆ. ಕ್ಷೇತ್ರದ ದರ್ಪಣ ತೀರ್ಥ ನದಿಯಲ್ಲಿ ಒಮ್ಮೆಲೆ ಪ್ರವಾಹ ಉಕ್ಕಿ ಹರಿದು ಸ್ವಲ್ಪ ಕಾಲ ಆತಂಕ ಸೃಷ್ಟಿಸಿತು.

Advertisement

ಕುಮಾರಪರ್ವತದ ತಪ್ಪಲು ಪ್ರದೇಶ ಮತ್ತು ಸ್ಥಳೀಯವಾಗಿ ಸತತ ನಾಲ್ಕು ತಾಸು ಮಳೆ ಸುರಿಯಿತು. ದರ್ಪಣ ತೀರ್ಥ ತುಂಬಿ ಹರಿದ ಪರಿಣಾಮ ಆದಿಸುಬ್ರಹ್ಮಣ್ಯ ದೇಗುಲದ ಹೊರಾಂಗಣಕ್ಕೆ ನೀರು ನುಗ್ಗಿದೆ. ಆದಿ ದೇಗುಲದ ಅಶ್ವತ್ಥ ಕಟ್ಟೆ ಮುಳುಗಡೆಗೊಂಡಿತ್ತು. ದೇಗುಲದ ಆವರಣದೊಳಕ್ಕೆ ನೆರೆ ನೀರು ಹರಿದಿದೆ. ತೀರ್ಥ ಸ್ನಾನ ನೆರವೇರಿಸುವಲ್ಲಿ ಮೆಟ್ಟಿಲ ತನಕ ನೀರು ಹರಿದಿದೆ. ಪಕ್ಕದಲ್ಲೇ ಇರುವ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಹಿಂಭಾಗದ ಕೆಲವು ಪ್ರದೇಶಗಳು ಮುಳುಗಡೆಗೊಂಡವು.

ಕಿರು ಸೇತುವೆ ಮುಳುಗಡೆ
ಇದೇ ಮೊದಲ ಬಾರಿಗೆ ದೇವರಗ¨ªೆಗೆ ತೆರಳುವ ಕಿರು ಸೇತುವೆ ಪೂರ್ಣ ಪ್ರಮಾಣದಲ್ಲಿ ಮುಳುಗಿತ್ತು. ಪರಿಸರದ ಹಲವು ವಸತಿಗೃಹಗಳಿಗೆ, ಸ್ಥಳೀಯ ನಾರಾಯಣ ಅವರ ಮನೆಗೆ ನೀರು ನುಗ್ಗಿದೆ. ದೇವರಗ¨ªೆ ಭಾಗಕ್ಕೆ ಸಂಪರ್ಕ ಕಡಿತಗೊಂಡಿತು. ದರ್ಪಣ ತೀರ್ಥ ನದಿ ಪಾತ್ರದ ಕೃಷಿ ಭೂಮಿ ಜಲಾವೃತಗೊಂಡವು. ಇಂತಹ ಮಳೆ ಈ ಹಿಂದೆ ಬಂದಿದ್ದರೂ ದರ್ಪಣ ತೀರ್ಥ ನದಿಯಲ್ಲಿ ಈ ಬಾರಿ ಇಷ್ಟೊಂದು ಪ್ರಮಾಣದಲ್ಲಿ ನೆರೆ ಹರಿದಿರುವುದು ಸ್ಥಳೀಯರಲ್ಲಿ ಅಚ್ಚರಿಗೆ ಕಾರಣವಾಗಿದೆ. ಮಳೆ ನಿಂತ ಅರ್ಧ ತಾಸಿನಲ್ಲಿ ಪ್ರವಾಹ ಕೂಡ ಇಳಿಯಿತು.

ಕ್ಷೇತ್ರದಲ್ಲಿ ಹರಿಯುವ ಕುಮಾರಧಾರಾ ನದಿಯಲ್ಲಿ ಅಷ್ಟೇನು ಪ್ರವಾಹ ಕಂಡು ಬಂದಿಲ್ಲ. ಗುತ್ತಿಗಾರು, ಪಂಜ, ಬಳ್ಪ ಐನಕಿದು, ಬಾಳುಗೋಡು ಕಲ್ಮಕಾರು, ಯೇನೆಕಲ್‌ ಕಡೆಗಳಲ್ಲಿ ಸಾಮಾನ್ಯ ಮಳೆಯಾಗಿದೆ.

ಭಕ್ತರಲ್ಲಿ ಆತಂಕ ಬೇಡ
ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಯಾವುದೇ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ದರ್ಪಣ ತೀರ್ಥ ನದಿಯಲ್ಲಿ ನೆರೆ ಹರಿದರು ಯಾವುದೇ ರೀತಿಯ ಸಮಸ್ಯೆಗಳಾಗಿಲ್ಲ. ಭಕ್ತರಿಗೂ ತೊಂದರೆಯಾಗಿಲ್ಲ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next