Advertisement

ಕುಲಾಲ ಸಂಘ ಮುಂಬಯಿ ಆಶ್ರಯ: ಗುರುಪೂರ್ಣಿಮೆ 

04:23 PM Aug 09, 2018 | |

ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ  ಗುರುವಂದನಾ ಭಜನಾ ಮಂಡಳಿಯ ಆಶ್ರಯದಲ್ಲಿ ಗುರುಪೂರ್ಣಿಮೆ ಆಚರಣೆಯು ಜು. 28 ರಂದು ಸಂಘದ ಕಚೇರಿಯಲ್ಲಿ ಜರಗಿತು.

Advertisement

ಈ ಭಜನಾ ಕಾರ್ಯಕ್ರಮವು ಜ್ಯೋತಿ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಇದರ ಸಿಬಂದಿ ವರ್ಗ ಮತ್ತು ಜೆಡಿಡಿ ಏಜೆಂಟರ ವತಿಯಿಂದ ಜರಗಿತು. ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕೊನೆಯಲ್ಲಿ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.

ಕುಲಾಲ ಸಂಘ ಮುಂಬಯಿ ಇದರ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಯುವ ವಿಭಾಗ, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ- ಸದಸ್ಯೆಯರು ಹಾಗೂ ಜ್ಯೋತಿ ಕೋ  ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ  ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು, ಗುರುಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next