Advertisement

‘ಭ್ರಷ್ಟಾಚಾರ ಸಹಿಸುವುದಿಲ್ಲ..’ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ

11:59 AM Feb 24, 2023 | Team Udayavani |

ಮಂಗಳೂರು: ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

Advertisement

ಇದುವರೆಗೆ ಆಯುಕ್ತರಾಗಿದ್ದ ಎನ್.ಶಶಿ ಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ:ಕನಸು ಕಂಗಳ ಕಾಶಿಮಾ…; ಇವರು ಸೌತ್ ಇಂಡಿಯಾನ್ ಹೀರೋಯಿನ್

ಇಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲ‌ ರೀತಿಯ ಅಕ್ರಮ ಚಟುವಟಿಕೆ ತಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದಿಂದ ಜನರಿಗೆ ಅನುಕೂಲಕರವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.

ಕುಲದೀಪ್ ಕುಮಾರ್ ಜೈನ್ ಅವರು 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next