Advertisement

Subramanya; ಕುಮಾರ ಪರ್ವತ ಚಾರಣ ಮುಂದಿನ ಅವಧಿಯಿಂದ ಆನ್‌ಲೈನ್‌ ಬುಕ್ಕಿಂಗ್‌

12:52 AM Jan 31, 2024 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತ ಚಾರಣಕ್ಕೆ ಫೆಬ್ರವರಿ 1ರಿಂದ ನಿಷೇಧ ಹೇರಲಾಗಿದ್ದು, ಮುಂದಿನ ಅಕ್ಟೋಬರ್‌ ಅಥವಾ ಮುಂದಿನ ಆದೇಶದ ಬಳಿಕ ಆರಂಭವಾಗುವ ಚಾರಣ ಪ್ರವೇಶಕ್ಕೆ ಸಂಪೂರ್ಣ ಆನ್‌ಲೈನ್‌ ಬುಕ್ಕಿಂಗ್‌ ಮೂಲಕವೇ ಪ್ರವೇಶಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಅರಣ್ಯ ಇಲಾಖೆ ಯೋಜನೆ ರೂಪಿಸಲಿದೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಕೆಲವು ದಿನಗಳ ಹಿಂದೆ ಸರಣಿ ರಜೆಯ ಹಿನ್ನೆಲೆಯಲ್ಲಿ ಕುಮಾರ ಪರ್ವತ ಚಾರಣಕ್ಕೆ ಒಂದೇ ದಿನ ಸಾವಿರಕ್ಕಿಂತ ಅಧಿಕ ಸಂಖ್ಯೆಯ ಚಾರಣಿಗರು ಆಗಮಿಸಿದ್ದರು. ಈ ಬಗ್ಗೆ ಪರಿಸರ ಪ್ರೇಮಿಗಳು ಅಸಮಾಧಾನ ಹಾಗೂ ಆತಂಕ ವ್ಯಕ್ತಪಡಿಸಿದ್ದರು. ಸಾವಿರಾರು ಸಂಖ್ಯೆಯ ಚಾರಣಿಗರ ಆಗಮನದಿಂದ ನಿಯಂತ್ರಣ ಹಾಗೂಅರಣ್ಯ ಇಲಾಖೆ ಸಿಬಂದಿಗೆ ತಪಾಸಣೆ ಮಾಡಿ ಬಿಡುವುದು ಸವಾಲಾಗುತ್ತದೆ. ಪರಿಸರಕ್ಕೂ ಹಾನಿ ಯಾಗುವ ಆತಂಕವನ್ನು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ವ್ಯಕ್ತಪಡಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next