Advertisement

Congress ಶಾಸಕರಿಗೆ ಕುಮಾರಸ್ವಾಮಿ ಆಮಿಷ: ಡಿಕೆಶಿ ಆರೋಪ

12:49 AM Feb 20, 2024 | Team Udayavani |

ಬೆಂಗಳೂರು: ಈ ತಿಂಗಳಿನ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ರಾಜಕೀಯ ಚಟುವಟಿಕೆ ಕಾವೇರತೊಡಗಿದೆ. ಗೆಲ್ಲಲು ಎಲ್ಲ ಕಡೆಯಿಂದ ರಣತಂತ್ರ ಗಳು ಆರಂಭವಾಗಿವೆ.

Advertisement

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಲವಾದ ಆರೋಪ ಮಾಡಿದ್ದು, “ಕುಮಾರಸ್ವಾಮಿ ಯಾರಿಗೆ ಫೋನ್‌ ಮಾಡಿ ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ ಎಲ್ಲವೂ ನಮಗೆ ತಿಳಿಯುತ್ತಿದೆ. ಅವರು ಯಾರಿಗೆ, ಯಾವೆಲ್ಲ ಆಫ‌ರ್‌ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ’ ಎಂದಿದ್ದಾರೆ.

“ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ’ ಎಂದು ಡಿಕೆಶಿ ಸಿಡಿಮಿಡಿಗೊಂಡಿದ್ದಾರೆ. ಇದು ಪರಸ್ಪರ ವಾಗ್ವಾದಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next