Advertisement
ತಮ್ಮ ಆಪ್ತ ವಲಯದಲ್ಲಿ ಮಾತ್ರವಲ್ಲದೆ, ಮಾಧ್ಯಮಗಳ ಮುಂದೆಯೂ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಪೆಟ್ರೋಲ್, ಡೀಸೆಲ್, ವಿದ್ಯುತ್ ಬಳಕೆ ಮತ್ತು ಮದ್ಯದ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸಿದ ಬಗ್ಗೆ ಮತ್ತು ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿಗೆ ಬಜೆಟ್ನಲ್ಲಿ ಏನೂ ಕೊಡುಗೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಜನಸಮುದಾಯ ಮತ್ತು ಆ ಭಾಗದ ಜನಪ್ರತಿನಿಧಿಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವುದು ಮುಖ್ಯಮಂತ್ರಿಗಳ ಆಕ್ರೋಶಕ್ಕೆ ಕಾರಣ.
ಸರಿಯಲ್ಲ ಎಂದು ತಮ್ಮ ಆಪ್ತ ವಲಯ ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಬೇಸರ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಮಾಜಿ ಉಪರಾಷ್ಟ್ರಪತಿ ಡಾ.ಬಾಬು ಜಗ ಜೀವನ ರಾಂ ಅವರ 32ನೇ ಪುಣ್ಯಸ್ಮರಣೆ ಅಂಗವಾಗಿ ಶುಕ್ರವಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇದು ಸಮಗ್ರ ಕರ್ನಾಟಕವನ್ನು ದೃಷ್ಟಿಯಲ್ಲಿ ಟ್ಟು ಕೊಂಡು ಮಂಡಿಸಿರುವ ಬಜೆಟ್. ಅದು ಅರ್ಥವಾಗದೇ ಇರುವವರಿಗೆ ಏನು ಹೇಳ್ಳೋಣ? ಯಾವ ಜಿಲ್ಲೆ, ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬುದನ್ನು ಚರ್ಚೆ ಮಾಡಲಿ ಎಂದು ಆಕ್ರೋಶ ಹೊರಹಾಕಿದರು. ಅಲ್ಲದೆ, ಕೇಂದ್ರ ಸರ್ಕಾರ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿದಾಗ ಇವರಿಗೆ ಕಣ್ಣು ಕಾಣಲಿಲ್ಲವೇ ಎಂದೂ ಪ್ರಶ್ನಿಸಿದರು.
Related Articles
Advertisement