Advertisement

ಜೆಡಿಎಸ್‌ ಶಾಸಕರ ದಿಢೀರ್‌ ಸಭೆ ನಡೆಸಿದ ಕುಮಾರಸ್ವಾಮಿ 

06:45 AM Sep 09, 2018 | Team Udayavani |

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಮೇಲೆ ಇಡಿ ಎಫ್ಐಆರ್‌ ದಾಖಲಿಸಲಿದೆ ಎಂಬ ಮಾತುಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಶನಿವಾರ ದಿಢೀರ್‌ ಜೆಡಿಎಸ್‌ ಶಾಸಕರ ಸಭೆ ಕರೆದು ಸಮಾಲೋಚನೆ ನಡೆಸಿದರು.

Advertisement

ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ, ಬಿಜೆಪಿಯವರು ಆಪರೇಷನ್‌ ಕಮಲ ಕಾರ್ಯಾಚರಣೆಗೆ ಇಳಿದಿರುವುದರಿಂದ
ಹುಷಾರಾಗಿರಿ ಎಂದು ಎಲ್ಲ ಶಾಸಕರಿಗೆ ಸೂಚನೆ ನೀಡಲಾಯಿತು ಎಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲಾ ವಿದ್ಯಮಾನಗಳು, ಡಿ.ಕೆ.ಶಿವಕುಮಾರ್‌ ವಿರುದಟಛಿದ ಐಟಿ ಪ್ರಕರಣ ಮುಂದೆ ಪಡೆದುಕೊಳ್ಳಬಹುದಾದ ಸ್ವರೂಪ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಜೆಡಿಎಸ್‌ ಶಾಸಕರು ಒಗ್ಗಟ್ಟಾಗಿ ಇರೋಣ. ಕಾಂಗ್ರೆಸ್‌ನಲ್ಲೂ ಎಲ್ಲರೂ ಒಗ್ಗಟ್ಟಾಗಿದ್ದಾರೆ. ಗೊಂದಲ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿದ್ದು ಅದರ ಬಗ್ಗೆ
ತಲೆಕೆಡಿಸಿಕೊಳ್ಳುವುದು ಬೇಡ ಎಂದು ಶಾಸಕರಿಗೆ ಕುಮಾರಸ್ವಾಮಿ ಕಿವಿಮಾತು ಹೇಳಿದರು ಎಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ನಿಗಮ ಮಂಡಳಿ ನೇಮಕಾತಿ, ಸಚಿವ ಸಂಪುಟದಲ್ಲಿ ಜೆಡಿಎಸ್‌ ಕೋಟಾದಡಿ ಖಾಲಿ ಇರುವ ಒಂದು ಸ್ಥಾನದ ಭರ್ತಿ ಕುರಿತು ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ. ದಿಢೀರ್‌ ಕರೆದ ಸಭೆಯಾದ್ದರಿಂದ ಎಲ್ಲ
ಜೆಡಿಎಸ್‌ ಶಾಸಕರು ಪಾಲ್ಗೊಂಡಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next