Advertisement

ಕುಮಾರಸ್ವಾಮಿಗೆ ಈಗ ಜ್ಞಾನೋದಯವಾಗಿದೆ, ಇನ್ನಾದರೂ ಕಾಂಗ್ರೆಸ್ ಸಹವಾಸ ಬಿಡಲಿ : ಸಿ ಟಿ ರವಿ

02:01 PM Dec 05, 2020 | Adarsha |

ಬೆಳಗಾವಿ:    ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ.

Advertisement

ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಚ್ ಡಿ ಕುಮಾರಸ್ವಾಮಿಯವರು  ಬಿಜೆಪಿ ಜೊತೆಗಿದ್ದರೆ ಮುಖ್ಯಮಂತ್ರಿ  ಆಗಿರುತ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾಗಿದೆ ಎಂದರು.

ಇದನ್ನೂ ಓದಿ:ಭ್ರಷ್ಟಾಚಾರ ಸಹಿಸಲ್ಲ: ಸಿಬಿಐನಿಂದ ಬಂಧಿಸಲ್ಪಟ್ಟ ಬಿಜೆಪಿ ಕೌನ್ಸಿಲರ್ ಪಕ್ಷದಿಂದ ಅಮಾನತು

ಕುಮಾರಸ್ವಾಮಿ ಇನ್ನಾದರೂ ಕಾಂಗ್ರೆಸ್ ಸಹವಾಸ ಬಿಡಲಿ. ಚಂಚಲ ಮನಸ್ಸು ಮಾಡಬೇಡಿ ಎಂದು ಕಿವಿಮಾತು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next