Advertisement

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

07:19 PM Sep 30, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(H D Kumaraswamy) ಅವರು ರಾಜಕಾರಣದಲ್ಲಿ ಸಮಯ ಮತ್ತು ಶಕ್ತಿಯನ್ನು ವ್ಯಯಿಸುವುದಕ್ಕಿಂತ ರಾಜ್ಯದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವತ್ತ ಗಮನ ಹರಿಸಬೇಕೆಂದು ಡಿಸಿಎಂ ಡಿ ಕೆ ಶಿವಕುಮಾರ್(D K Shivakumar) ಅವರು ಸೋಮವಾರ(ಸೆ30) ಒತ್ತಾಯಿಸಿದ್ದಾರೆ.

Advertisement

“ಅಧಿಕೃತ ಮಟ್ಟದಲ್ಲಿ ಮಾಹಿತಿ ಸೋರಿಕೆಯಾಗುತ್ತಿದೆ” ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರು “ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಬದಲು ತಮ್ಮ ಖಾತೆಯಲ್ಲಿ ಕೆಲ್ಸಮಾಡಬೇಬೇಕು” ಎಂದು ತಿರುಗೇಟು ನೀಡಿದರು.

”ಕುಮಾರಸ್ವಾಮಿ ಅವರು ರಾಜಕೀಯ ಮಾಡುವುದಕ್ಕಿಂತ ರಾಜ್ಯದಲ್ಲಿ 50 ಸಾವಿರದಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಸುವತ್ತ ಗಮನಹರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಉತ್ತಮ ಖಾತೆಯನ್ನೇ ನೀಡಿದ್ದಾರೆ, ಅನಗತ್ಯ ಹೇಳಿಕೆಗಳನ್ನು ನೀಡುವ ಬದಲು ಉದ್ಯೋಗಗಳನ್ನು ಸೃಷ್ಟಿಸಲು ಅದನ್ನು ಬಳಸಿಕೊಳ್ಳಬೇಕು” ಎಂದು ಶಿವಕುಮಾರ್ ಹೇಳಿದರು.

“ರಾಜಕೀಯ ಯಾವಾಗಲೂ ಇರುತ್ತದೆ, ಆದರೆ ಕೇಂದ್ರ ಸಚಿವರು ಆ ಪರಂಪರೆಯನ್ನು ಬಿಟ್ಟುಬಿಡುವತ್ತ ಗಮನ ಹರಿಸಬೇಕಾಗಿದೆ. ಆದರೆ ಅವರು ಆ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next