Advertisement

ಎಷ್ಟೇ ಸರ್ಕಸ್‌ ಮಾಡಿದರೂ ಕುಮಾರಸ್ವಾಮಿ ಸಿಎಂ ಆಗಲ್ಲ: ಬಾಲಕೃಷ್ಣ

07:50 AM Apr 30, 2018 | Team Udayavani |

ಮಾಗಡಿ: ಎಷ್ಟೇ ಸರ್ಕಸ್‌ ಮಾಡಿದರೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಸಿ.ಬಾಲಕೃಷ್ಣ ತಿಳಿಸಿದ್ದಾರೆ. 

Advertisement

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 100 ಸ್ಥಾನಗಳನ್ನು ಗೆಲ್ಲಲಿವೆ ಎಂದು ಮಾಧ್ಯಮಗಳ ಸಮೀಕ್ಷೆಯೇ ಹೇಳಿದೆ. ಉಳಿದ 13 ಸ್ಥಾನಗಳನ್ನು ಜೆಡಿಎಸ್‌ನ ಸ್ನೇಹಿತರನ್ನು ಸೆಳೆಯುವ ತಾಕತ್ತು ನಮಗಿದೆ. ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಏನೇ ಸರ್ಕಸ್‌ ಮಾಡಿದರೂ 35 ರಿಂದ 38ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಕಷ್ಟ. ಸಮೀಕ್ಷೆಗಳೇ ಇದನ್ನು ಹೇಳಿವೆ. ಹೀಗಾಗಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next