Advertisement

ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಕುಮಾರಸ್ವಾಮಿ ಭೇಟಿ

09:34 PM Feb 25, 2023 | Team Udayavani |

ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದ ಪಡೆದರು.

Advertisement

ನರಸಿಂಹವನದ ಗುರುಭವನದಲ್ಲಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು.

ನಂತರ ಶ್ರೀಮಠದ ಹೊರ ಆವರಣದ ಶ್ರೀ ಸುಬ್ರಮಣ್ಯ ದೇವಸ್ಥಾನ, ಶ್ರೀ ಜನಾರ್ಧನಸ್ವಾಮಿ, ಶ್ರೀ ವಿದ್ಯಾಶಂಕರ ದೇಗುಲ, ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ತೋರಣ ಗಣಪತಿ ದೇವಸ್ಥಾನ ಹಾಗೂ ಶ್ರೀಮಠದ ಒಳ ಆವರಣದ ಶ್ರೀ ಶಕ್ತಿಗಣಪತಿ ಹಾಗೂ ಶ್ರೀ ಶಾರದಾಂಬೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಅವರೊಂದಿಗೆ ಪತ್ನಿ ಅನಿತಾ ಕುಮಾರಸ್ವಾಮಿ ಶ್ರೀಮಠಕ್ಕೆ ಭೇಟಿ ನೀಡಿದ್ದರು. ಜೆಡಿಎಸ್‌ ಮುಖಂಡರಾದ ದಿನೇಶ್‌ ಹೆಗ್ಡೆ, ಸುಂಕುರ್ಡಿ ವಿವೇಕಾನಂದ, ಮಲ್ಲೇಶ್‌, ವೆಂಕಪ್ಪಚಾರ್ಯ, ನವೀನ್‌, ಎಚ್‌.ಜಿ. ದೇವೇಂದ್ರ, ಜಮಾಲ್‌ ಸಾಬ್‌, ದಿವಾಕರ ಭಟ್‌ ಮೊದಲಾದವರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next