Advertisement

ಎಚ್‌.ಡಿ. ಕುಮಾರಸ್ವಾಮಿ ಹಿಟ್‌ ಆ್ಯಂಡ್‌ ರನ್‌ ಗಿರಾಕಿ: ಸಿದ್ದರಾಮಯ್ಯ

10:44 PM Oct 17, 2021 | Team Udayavani |

ಹುಬ್ಬಳ್ಳಿ ನಾನು ಅಲ್ಪಸಂಖ್ಯಾಕರ ವಿರೋಧಿ ಎಂದು ಎಚ್‌.ಡಿ. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದು. ಇವುಗಳಿಗೆಲ್ಲ ಪ್ರತಿಕ್ರಿಯೆ ನೀಡದಿರಲು ನಿರ್ಧರಿಸಿದ್ದೇನೆ. ಎಚ್‌ಡಿಕೆ ಯಾವಾಗಲೂ ಹಿಟ್‌ ಆ್ಯಂಡ್‌ ರನ್‌ ಗಿರಾಕಿ ಎಂದು ಸಿದ್ದರಾಮಯ್ಯ ಟೀಕಿಸಿದರು.

Advertisement

ರವಿವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕುಮಾರಸ್ವಾಮಿ ಹೇಳಿಕೆ ಯಿಂದ ನನಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ ಎಂದರು.

ಆರೆಸ್ಸೆಸ್‌ ಕೋಮುವಾದಿ ಸಂಘಟನೆ. ನಾನು ರಾಜಕೀಯಕ್ಕೆ ಬಂದಾಗಿನಿಂದ 1971ರಿಂದಲೇ ಆರೆಸ್ಸೆಸ್ಸನ್ನು ವಿರೋಧಿಸುತ್ತಿದ್ದೇನೆ. 1925ರಿಂದ ಇಲ್ಲಿಯವರೆಗೆ ಅವರ ಇತಿಹಾಸ ನೋಡಿದರೆ ದೇಶ ಮತ್ತು ಸಮಾಜ ವಿಭಜನೆ ಕೆಲಸ ಮಾಡುತ್ತಿದ್ದಾರೆ ವಿನಾ ಒಗ್ಗೂಡಿಸುವವರಲ್ಲ. ಬಿಜೆಪಿಯಲ್ಲಿ ಒಬ್ಬ ಮುಸ್ಲಿಂ ಎಂಎಲ್‌ಎ ಇದ್ದಾರೆಯೇ? ಆರೆಸ್ಸೆಸ್‌ನಲ್ಲಿ ಮುಸ್ಲಿಂ-ಕ್ರಿಶ್ಚಿಯನ್‌ರನ್ನು ಸದಸ್ಯರನ್ನಾಗಿ ಮಾಡಿಕೊಂಡಿಲ್ಲ. ಇದು ಅಲ್ಪಸಂಖ್ಯಾಕರ ವಿರೋಧಿಯಾಗಿದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್‌ ಅರ್ಹತಾ ಸುತ್ತಿನ ಮೊದಲ ಪಂದ್ಯ: ಒಮಾನ್‌ಗೆ 10 ವಿಕೆಟ್‌ ಭರ್ಜರಿ ಗೆಲುವು

ತೈಲ ದರಕ್ಕೆ ಜಿಎಸ್‌ಟಿ ಸಲ್ಲದು
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿದಿದ್ದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಕರ ಕಡಿಮೆ ಮಾಡುತ್ತಿಲ್ಲ. ಕಚ್ಚಾತೈಲ ದರ ಕಡಿಮೆ ಇದ್ದರೂ ಹೆಚ್ಚುವರಿಯಾಗಿ ಅಬಕಾರಿ ಸುಂಕ ಹೆಚ್ಚಿಸಿದ್ದು, ಅದನ್ನು ಶೇ.50 ಕಡಿಮೆ ಮಾಡಬೇಕು. ಪೆಟ್ರೋಲ್‌ ಮೇಲೆ ಮಾರಾಟ ತೆರಿಗೆ ವಿಧಿಸುವುದು ರಾಜ್ಯದ ಅಧಿಕಾರ. ಅದನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿದರೆ ಅದು ಕೇಂದ್ರ ಸರಕಾರದ ವ್ಯಾಪ್ತಿಗೆ ಹೋಗುತ್ತದೆ. ಆದ್ದರಿಂದ ತೈಲ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next