Advertisement

ಜೈಪುರ, ಭೋಪಾಲ್‌ಗೆ ಮುಖ್ಯಮಂತ್ರಿ

07:20 AM Dec 17, 2018 | Karthik A |

ಬೆಳಗಾವಿ: ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರಕಾರದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೋಮವಾರ ಹಾಜರಾಗಲಿದ್ದಾರೆ. ಜೈಪುರ, ಭೋಪಾಲ್‌ಗೆ ಕುಮಾರಸ್ವಾಮಿ ಪ್ರಯಾಣ ಬೆಳೆಸಲಿದ್ದು ಸೋಮವಾರ ಕಲಾಪಕ್ಕೆ ಹಾಜರಾಗುವುದು ಅನುಮಾನ. ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಿದ್ದು ಅದರಲ್ಲಿ ಸಿಎಂ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ.

Advertisement

ಸಿದ್ದರಾಮಯ್ಯ ಭಾಗಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ರಾಜಸ್ಥಾನ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜಸ್ಥಾನದ ನಿಯೋಜಿತ ಮುಖ್ಯಮಂತ್ರಿ ಕಮಲ್‌ನಾಥ್‌ ಮತ್ತು ಮಧ್ಯಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಅಶೋಕ್‌ ಗೆಹ್ಲೊಟ್‌ ಅವರ ಆಹ್ವಾನದ ಮೇರೆಗೆ ಸಿದ್ದರಾಮಯ್ಯ ಅವರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸೋಮವಾರ ಸಂಜೆ ಬೆಳಗಾವಿಗೆ ವಾಪಸಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next