Advertisement

ಕುಮಾರಸ್ವಾಮಿಯದ್ದು ಯಾವತ್ತೂ ಠುಸ್‌ ಬಾಂಬ್‌: ಎಸ್‌.ಮುನಿಸ್ವಾಮಿ ಲೇವಡಿ 

12:52 AM Feb 06, 2023 | Team Udayavani |

ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಕೋದೆಲ್ಲ ಠುಸ್‌ ಬಾಂಬ್‌ ಎಂದು ಸಂಸದ ಎಸ್‌.ಮುನಿಸ್ವಾಮಿ ಲೇವಡಿ ಮಾಡಿದರು.

Advertisement

ತಾಲೂಕಿನ ನರಸಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ನಿಮ್ಮ ಮನೆಯಲ್ಲಿ ಉರಿಯುತ್ತಿರುವ ಬೆಂಕಿಯನ್ನು ಆರಿಸಿಕೊಳ್ಳಿ, ಅನಂತರ ನಮ್ಮ ಪಕ್ಷದ ಬಗ್ಗೆ ಯೋಚಿಸಿ. ಬಾಯಿ ಚಪಲಕ್ಕೆ ಏನೇನೋ ಮಾತನಾಡಬೇಡಿ ಎಂದು ಸಲಹೆ ನೀಡಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಗೊಂದಲ ಸೃಷ್ಟಿಸಲು ಹೀಗೆಲ್ಲ ಹೇಳುತ್ತಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅಷ್ಟಕ್ಕೂ ಏನೇ ಇದ್ದರೂ ಬಿಜೆಪಿ ಆಂತರಿಕ ವಿಚಾರ, ನಮ್ಮ ಪಕ್ಷ ಒಡೆಯುವ ಇವರ ಪ್ರಯತ್ನ ಫಲಿಸದು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next