Advertisement

ಕುಮಾರ ಉದ್ಯೋಗ’ಆ್ಯಪ್‌ ಬಿಡುಗಡೆ

07:55 AM Jan 13, 2018 | Team Udayavani |

ಬೆಂಗಳೂರು: ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜೆಡಿಎಸ್‌ “ಕುಮಾರ ಉದ್ಯೋಗ’ ಎಂಬ ಆ್ಯಪ್‌ ಬಿಡುಗಡೆ ಮಾಡಿದೆ. ಈ ಮೂಲಕ ನಿರುದ್ಯೋಗ ಯುವಕ-ಯುವತಿಯರಿಗೆ ಜೆಡಿಎಸ್‌ ಸರ್ಕಾರ ಬಂದರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದೆ. 

Advertisement

ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕದ ಯುವಕರಿಗೆ ನನ್ನದೊಂದು ಸಣ್ಣ ಉಡುಗೊರೆ ಎಂದು ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂದೇಶ ರವಾನೆಯಾಗುತ್ತಿದ್ದಂತೆ ಒಂದು ಗಂಟೆ ಅವಧಿಯಲ್ಲಿ ಎಂಟು ಸಾವಿರ ಮಂದಿ ನೋಂದಣಿ ಸಹ ಮಾಡಿಕೊಂಡಿದ್ದಾರೆ.

ನೋಂದಣಿ ಹೇಗೆ?: ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ತಮ್ಮ ವಿದ್ಯಾರ್ಹತೆ ಸಮೇತ “ಕುಮಾರ ಉದ್ಯೋಗ’ ಎನ್ನುವ ಅಂಡ್ರಾಯ್ಡ ಅಪ್ಲಿಕೇಶನ್‌ನ್ನು ಗೂಗಲ್‌ ಅಂಡ್ರಾಯ್ಡ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್‌ ಮಾಡಿಕೊಂಡು ಮಾಹಿತಿ ಸಲ್ಲಿಸಬಹುದು. ಈ ರೀತಿ ಸಂಗ್ರಹಿಸಿದ ಮಾಹಿತಿ ಪಡೆದು 2018 ರ ವಿಧಾನಸಭೆ ಚುನಾವಣೆಯಲ್ಲಿ ನನ್ನ ನೇತೃತ್ವದ ಸರ್ಕಾರ ರಚನೆ ಆದ ಕೂಡಲೇ ಸರ್ಕಾರಿ/ ಖಾಸಗಿ ಕಂಪನಿಗಳ ಜತೆ ಚರ್ಚಿಸಿ ಆದ್ಯತೆ ಮೇರೆಗೆ ವಿವರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಯೋಜನೆ ರೂಪಿಸಲಾಗುವುದು. ಚುನಾವಣೆಗೆ ಮೊದಲೇ ಉದ್ಯೋಗದ ಅವಶ್ಯಕತೆ ಇರುವ ಯುವಕ-ಯುವತಿಯರ ವಿವರ ಪಡೆಯಲಾಗುವುದು. ಎಲ್ಲ ವಿವರ ದಾಖಲಾತಿ ಸಮೇತ ಇಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next