Advertisement

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

03:17 AM Oct 23, 2024 | Team Udayavani |

ಕುಂಬಳೆ: ಸಿಪಿಸಿಆರ್‌ಐ, ಎಸ್‌ಬಿಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕದ ಅಬಕಾರಿ ಇಲಾಖೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಭರವಸೆ ನೀಡಿ ಕೋಟ್ಯಂತರ ರೂ. ವಂಚಿಸಿದ ಮಾಜಿ ಡಿವೈಎಫ್‌ಐ ನೇತಾರೆ, ಬಾಡೂರು ಶಾಲೆಯ ಅಧ್ಯಾಪಕಿ ಸಚಿತಾ ರೈ ಮನೆಗೆ ಕುಂಬಳೆ ಪೊಲೀಸರು ದಾಳಿ ನಡೆಸಿದ್ದಾರೆ.

Advertisement

ಆದರೆ ಮನೆಯಿಂದ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಮೊದಲೇ ಮನೆಯಿಂದ ದಾಖಲೆಗಳನ್ನು ಸಾಗಿಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಸಚಿತಾ ಕೋಯಿಕ್ಕೋಡ್‌ನ‌ಲ್ಲಿ ಪತಿಯ ಜತೆ ಇದ್ದರೆಂದೂ, ಈಗ ಎಲ್ಲಿದ್ದಾಳೆ ಎಂಬುದು ತಿಳಿದಿಲ್ಲ ಎಂದು ಸಂಬಂಧಿಕರು ಪೊಲೀಸರಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಚಿತಾ ರೈ ನಿರೀಕ್ಷಣ ಜಾಮೀನಿಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕ್‌ ಅಕೌಂಟ್‌ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಲಿದ್ದಾರೆ. ಸುಮಾರು 5 ಕೋಟಿ ರೂಪಾಯಿ ವಂಚನೆ ನಡೆಸಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next