Advertisement

ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ದರ್ಶನಕ್ಕೆ ಮುಕ್ತ ಅವಕಾಶ

02:49 PM Jun 08, 2020 | sudhir |

ತೆಕ್ಕಟ್ಟೆ  : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್‌ 19 ವೈರಸ್‌ ತಡೆಗಟ್ಟಲು ಇಡೀ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ನಂತರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದ್ದು , ಕುಂದಾಪುರ ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಂಜಾನೆಯಿಂದಲೇ ನಂಬಿದ ಭಗವದ್ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿ ದರ್ಶನ ಪಡೆದರು.

Advertisement

ದೇವರ ದರ್ಶನಕ್ಕೂ ಮುನ್ನ ಸರಕಾರ ಆದೇಶದಂತೆ ಥರ್ಮಲ್‌ ಸ್ಕ್ಯಾನ್‌ ಮಾಡಿಸಿ ನಂತರ ಸರತಿ ಸಾಲಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜತೆಗೆ ಸ್ಯಾನಿಟೈಸರ್‌ನಿಂದ ಕೈಗಳನ್ನು ಉಜ್ಜಿಕೊಂಡು ಕಡ್ಡಾಯ ವಾಗಿ ಮಾಸ್ಕ್ ಅಥವಾ ಕರವಸ್ತ್ರವನ್ನು ಧರಿಸಿ ಒಳಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ತಿಳಿಸಿದ್ದಾರೆ.

ಚಿತ್ರ/ ವರದಿ: ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

 

Advertisement

Udayavani is now on Telegram. Click here to join our channel and stay updated with the latest news.

Next