Advertisement

Kumbhashi ಆನೆಗುಡ್ಡೆ ದೇಗುಲ: ಬ್ರಹ್ಮರಥೋತ್ಸವ

11:27 PM Dec 16, 2023 | Team Udayavani |

ತೆಕ್ಕಟ್ಟೆ: ಇಲ್ಲಿನ ಪುರಾಣ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ, ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗವು ಡಿ. 16ರಂದು ಸಂಭ್ರಮದಿಂದ ನಡೆಯಿತು.

Advertisement

ದೇವರ ಬ್ರಹ್ಮರಥೋತ್ಸವಕ್ಕಾಗಿ ಸಹಸ್ರಾರು ಭಕ್ತರು ಆಗಮಿಸಿದ್ದು, 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. 5 ಸಾವಿರ ಕ್ಕೂ ಅಧಿಕ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ದೇಗುಲದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ , ಅನುವಂಶಿಕ ಧರ್ಮದರ್ಶಿ ಗಳಾದ ಕೆ. ವಿಠಲ ಉಪಾಧ್ಯಾಯ, ಕೆ. ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಶ್ರೀಶ ಉಪಾಧ್ಯಾಯ, ಕಚೇರಿ ವ್ಯವಸ್ಥಾಪಕ ನಟೇಶ್‌ ಕಾರಂತ್‌ ತೆಕ್ಕಟ್ಟೆ, ಅರ್ಚಕ ಮಂಡಳಿಯ ಸದಸ್ಯರು ಹಾಗೂ ಸಿಬಂದಿ ವರ್ಗ ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next