Advertisement

ಕುಂಭಾಸಿ : ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ: ಸಂಭ್ರಮದ ಬ್ರಹ್ಮ ರಥೋತ್ಸವ

04:30 PM Dec 07, 2021 | Team Udayavani |

ತೆಕ್ಕಟ್ಟೆ  : ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ, ಅಷ್ಟೋತ್ತರ ಸಹಸರ ನಾಳಿಕೇರ ಗಣಯಾಗವು ಕೋವಿಡ್‌ 19 ನಿಯಮಾನುಸಾರ ಡಿ.7 ರಂದು ಸಂಪ್ರದಾಯದಂತೆ ಸಂಭ್ರಮದಿಂದ ನಡೆಯಿತು.

Advertisement

35 ಸಾವಿರಕ್ಕೂ ಅಧಿಕ ಭಕ್ತರಿಂದ ದರ್ಶನ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಕ್ಕೆ ಮುಂಜಾನೆಯಿಂದಲೂ ನಂಬಿದ ಸಾವಿರಾರು ಭಕ್ತರು ಶ್ರೀ ದೇಗುಲಕ್ಕೆ ಆಗಮಿಸಿದ್ದು , ಸುಮಾರು 35 ಸಾವಿರಕ್ಕೂ ಅಧಿಕ ಭಕ್ತರು ದರ್ಶನ ಪಡೆದರು.

ದೇವಳವನ್ನು ಸಂಪೂರ್ಣ ಹೂವಿನ ಅಲಂಕಾರ ಮಾಡಲಾಗಿದ್ದು ,ಆಕರ್ಷಕ ಕೀಲು ಕದುರೆ ಹಾಗೂ ಗೊಂಬೆಗಳ ಕುಣಿತಗಳು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ನಂಬಿದ ಭಕ್ತರು ನೆರೆದಿದ್ದರು.

Advertisement

ಈ ಸಂದರ್ಭದಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಹಿರಿಯ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕ ಕೆ.ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಅರ್ಚಕ ಮಂಡಳಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next