Advertisement

ಕುಂಬ್ಳೆ,ಶ್ರೀನಾಥ್ ಸೇರಿ ಕ್ರಿಕೆಟಿಗರ ಭೇಟಿಯಾದ ಪ್ರಧಾನಿ; ವಿವಿಧ ವಿಷಯಗಳ ಕುರಿತು ಚರ್ಚೆ

03:26 PM Feb 13, 2023 | Team Udayavani |

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ರಾತ್ರಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾರತ ತಂಡ ಪ್ರತಿನಿಧಿಸಿದ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಮತ್ತು ವೆಂಕಟೇಶ್ ಪ್ರಸಾದ್, ಸಕ್ರಿಯ ಆಟಗಾರರಾಗಿರುವ ಮಯಾಂಕ್ ಅಗರ್ವಾಲ್ ಮತ್ತು ಮನೀಶ್ ಪಾಂಡೆ ಅವರು ಭಾಗಿಯಾದರು.

Advertisement

ಭಾರತದಲ್ಲಿ ಕ್ರೀಡಾ ಮೂಲಸೌಕರ್ಯ, ಒಲಿಂಪಿಕ್ಸ್ ಮತ್ತು ಕ್ರೀಡಾ ಸಂಸ್ಕೃತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಧಾನಿ ಮೋದಿ ಚರ್ಚಿಸಿದ್ದಾರೆ ಎಂದು ವೆಂಕಟೇಶ್ ಪ್ರಸಾದ್ ಟ್ವೀಟ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ : ಅಯ್ಯೋ!… ಎಂದ ಪ್ರಧಾನಿ ಮೋದಿ ; ಸಂತಸ ಹಂಚಿಕೊಂಡ ಶ್ರದ್ಧಾ ಜೈನ್

14ನೇ ಆವೃತ್ತಿಯ ಏರೋ ಇಂಡಿಯಾ ಶೋವನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮತ್ತು ಅವರ ಕಚೇರಿ ಕೆಲವು ಪ್ರಭಾವಿಗಳನ್ನು ಭೋಜನ ಕೂಟಕ್ಕೆಕ್ಕೆ ಆಹ್ವಾನಿಸಿದ್ದರು.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಭಾಗವಹಿಸಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next