Advertisement

ಕುಂಪಲ: ಪಟಾಕಿ ಸಿಡಿಸಿದ ವಿಚಾರ… ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ

09:59 PM Jun 05, 2024 | Team Udayavani |

ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.

Advertisement

ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಇವರಿಗೆ ಸ್ಥಳೀಯ ಸಂಘವೊಂದರಲ್ಲಿ ಸದಸ್ಯರಾಗಿರುವ ಪ್ರಸ್ತುತ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ಗೌತಮ್ ಹಲ್ಲೆ ನಡೆಸಿದ ಆರೋಪಿ ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಸ್ಥಳೀಯ ಸಂಸ್ಥೆಯೊಂದರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂಬಂಧ ಇಂದು ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿದ್ದು, ಪರಿಣಾಮ ಚರಂಡಿಗೆ ಬಿದ್ದ ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗಡ ದಾಖಲಿಸಲಾಗಿದೆ.

ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Advertisement

Udayavani is now on Telegram. Click here to join our channel and stay updated with the latest news.

Next